ಯಳಂದೂರು: ತಾಲೂಕಿನಾದ್ಯಂತ ಓಖಿ ಚಂಡಮಾರುತದ ಪರಿಣಾಮ ಶುಕ್ರವಾರ ಮುಂಜಾನೆಯಿಂದಲೇ ಮಳೆ ಸುರಿಯಿತು. ಬಿಳಿಗಿರಿರಂಗನಬೆಟ್ಟದಲ್ಲಿ ರಾತ್ರಿಯಿಂದಲೇ ತುಂತುರು ಮಳೆ ಸುರಿಯಿತು ನಂತರ ಬಿರುಸಾಯಿತು. ಮಧ್ಯಾಹ್ನನದ ನಂತರ ಸುರಿದ ಭಾರಿ ಮಳೆಗೆ ಕೃಷಿಕರು ಮತ್ತು ಸಾರ್ವಜನಿಕರು ಪರದಾಡಿದರು.
ಮಳೆಯಿಂದಾಗಿ ಪಟ್ಟಣದ ಪ್ರಮುಖ ಬಡಾವಣೆಗಳ ರಸ್ತೆ, ಚರಂಡಿಗಳಲ್ಲಿ ನೀರು ತುಂಬಿ ಹರಿಯಿತು. ವಿದ್ಯಾರ್ಥಿಗಳು, ಸಾರ್ವಜಿಕರು ಪರದಾಡುವಂತಾಯಿತು. ಮಳೆಯಿಂದ ರಕ್ಷಣೆ ಪಡೆಯಲು ಬಸ್ ನಿಲ್ದಾಣ ಸೇರಿದಂತೆ ಅಂಗಡಿಗಳ ಮೊರೆ ಹೋದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.