ADVERTISEMENT

‌ಅಭಿವೃದ್ಧಿ ಪಥ: ಜೆಡಿಎಸ್‌ಗೆ ಮತ

ಕಾರ್ಯಕರ್ತರ ಸಮಾವೇಶದಲ್ಲಿ ಕೃಷ್ಣಾರೆಡ್ಡಿ ಮನವಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 10:25 IST
Last Updated 3 ಏಪ್ರಿಲ್ 2018, 10:25 IST

ಚಿಂತಾಮಣಿ: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶಾಸಕ ಎಂ.ಕೃಷ್ಣಾರೆಡ್ಡಿ ಭರವಸೆ ವ್ಯಕ್ತಪಡಿಸಿದರು.ತಾಲ್ಲೂಕಿನ ಬಟ್ಲಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ 20 ತಿಂಗಳು ಮಾಡಿದ್ದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣುಮುಂದೆ ಇವೆ. ಬಡವರಿಗೆ, ರೈತರಿಗೆ ಸೇರಿದಂತೆ ಎಲ್ಲ ವರ್ಗದ ಜನರಿಗೆ ವಿಶೇಷ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದರು. ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಜೆಡಿಎಸ್‌ಗೆ ಮತ ನೀಡಿ ಎಂದು ಮನವಿ ಮಾಡಿದರು.

‘ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಕೂಡಲೇ ರೈತರ ಎಲ್ಲ ಸಾಲ ಮನ್ನಾ ಮಾಡುತ್ತಾರೆ. ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವರು’ ಎಂದರು.‘ನಾನು 5 ವರ್ಷಗಳಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಸಾಮಾಜಿಕ ನ್ಯಾಯದಂತೆ ಎಲ್ಲ ಗ್ರಾಮಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಏ.19 ರಂದು ನಾಮಪತ್ರ ಸಲ್ಲಿವೆ’ ಎಂದು ತಿಳಿಸಿದರು.ಮುಂಗಾನಹಳ್ಳಿ ಹೋಬಳಿಯ ಹಲವು ಮುಖಂಡರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್‌ ಸೇರಿದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ವಿ.ನಾಗಪ್ಪ, ಮುಖಂಡರಾದ ಶೇಖ್‌ಮೌಲಾ, ಯನಮಲಪಾಡಿ ಚಂದ್ರಾರೆಡ್ಡಿ, ಜ್ಯೂಸ್‌ ರೆಡ್ಡಿ, ಶಿವಣ್ಣ, ಅಪ್ಪಾಜಿ, ಕೋಡಿಗಲ್‌ ರಮೇಶ್‌, ಮಂಜುನಾಥಾಚಾರಿ, ಶಫೀಕ್‌, ಮಸಿಲಹಳ್ಳಿ ಮಂಜು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.