ಶಿರಾ: ತಾಲ್ಲೂಕಿನ ತಾವರೆಕೆರೆ ಗ್ರಾಮದ ಬಲಮುರಿ ವಿನಾಯಕ ದೇವಸ್ಥಾನದಲ್ಲಿ ಸೆ.22 ರಂದು ಸಂಜೆ 5 ಗಂಟೆಗೆ ಗೌಡಗೆರೆ ಹೋಬಳಿಯ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಗಾಗಿ ವಿವಿಧ ಸಮಿತಿಗಳ ರಚನೆಯ ಬಗ್ಗೆ ಚರ್ಚೆ ನಡೆಸಲು ಪೂರ್ವ ಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಸಮ್ಮೇಳನದ ಅಧ್ಯಕ್ಷರಾಗಿ ಲೇಖಕ ಬಿ.ಎಸ್.ಭಾಸ್ಕರ್ರಾವ್ ಆಯ್ಕೆಯಾಗಿದ್ದು. ತಾವರೆಕೆರೆ ಗ್ರಾಮದಲ್ಲಿ ನಡೆಯಲಿರುವ ಸಮ್ಮೇಳನವನ್ನು ಯಶಸ್ವಿಗೊಳಿಸಲು ವಿವಿಧ ಸಮಿತಿ ರಚಿಸುವ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿಸುವುದರಿಂದ ಸಭೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಬಂದು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಗೌಡಗೆರೆ ಹೋಬಳಿ ಘಟಕದ ಕಸಾಪ ಅಧ್ಯಕ್ಷ ಹುಣಸೇಹಳ್ಳಿ ರಾಜಣ್ಣ ಮನವಿ ಮಾಡಿದ್ದಾರೆ.
ಮಾಹಿತಿಗಾಗಿ ಗೌಡಗೆರೆ ಹೋಬಳಿ ಕಸಾಪ ಅಧ್ಯಕ್ಷ ಹುಣಸೇಹಳ್ಳಿ ರಾಜಣ್ಣ ಮೊ. 9902857955, ಸಕ್ಕರ ನಾಗರಾಜು ನಿರ್ದೇಶಕರು ತಾಲ್ಲೂಕು ಕಸಾಪ ಮೊ. 9663941596 ಸಂಪರ್ಕಿಸುವುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.