ಶಿಡ್ಲಘಟ್ಟ: ತಾಲ್ಲೂಕಿನ ಜಂಗಮಕೋಟೆಯಲ್ಲಿ ಭಾನುವಾರ ಶ್ರೀ ಪ್ರಸನ್ನ ಗಂಗಾಧರೇಶ್ವರಸ್ವಾಮಿ ಗೆಳೆಯರ ಬಳಗದ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಆನೆಯ ಮೇಲೆ ಗಂಗಾಧರೇಶ್ವರಸ್ವಾಮಿ ಮೂರ್ತಿಯ ಮೆರವಣಿಗೆ ಮತ್ತು ಗ್ರಾಮದ ಹದಿನಾಲ್ಕು ದೇವರುಗಳ ಮೆರೆವಣಿಗೆಯನ್ನು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಂ.ರಾಜಣ್ಣ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಹಮತ್ ಜಾನ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಮೇಲೂರು ರವಿಕುಮಾರ್, ಬಿಜೆಪಿ ಮುಖಂಡ ಸುರೇಶ್, ವಿಜಯಪುರ ಮಠದ ಮಹಾದೇವ ಸ್ವಾಮೀಜಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.