ADVERTISEMENT

ತ್ಯಾಜ್ಯ ವಿಲೇವಾರಿ ಮಾಡಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2017, 8:44 IST
Last Updated 12 ಸೆಪ್ಟೆಂಬರ್ 2017, 8:44 IST
ಚಿಕ್ಕಬಳ್ಳಾಪುರದ ಐಟಿಐ ಕಾಲೇಜು ತಿರುವಿನಲ್ಲಿ ವಿಲೇವಾರಿಯಾಗದೆ ಉಳಿದ ತ್ಯಾಜ್ಯದ ರಾಶಿ
ಚಿಕ್ಕಬಳ್ಳಾಪುರದ ಐಟಿಐ ಕಾಲೇಜು ತಿರುವಿನಲ್ಲಿ ವಿಲೇವಾರಿಯಾಗದೆ ಉಳಿದ ತ್ಯಾಜ್ಯದ ರಾಶಿ   

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಮಹಾ ಕಾಳಿ ರಸ್ತೆಯ ಮೂಲಕ ನಂದಿಗೆ ಹೋಗುವ ರಸ್ತೆಯಲ್ಲಿ ಐಟಿಐ ಕಾಲೇಜು ತಿರುವಿನಲ್ಲಿ ಸುರಿದ ತ್ಯಾಜ್ಯದ ರಾಶಿಯನ್ನು ಪೌರಕಾರ್ಮಿಕರು ಅನೇಕ ದಿನಗಳಿಂದ ವಿಲೇವಾರಿ ಮಾಡಿಲ್ಲ. ಇದರಿಂದಾಗಿ ಮಳೆ ಸುರಿದರೆ ಇಲ್ಲಿ ಅಸಹ್ಯಕರ ವಾತಾವರಣ ಸೃಷ್ಟಿಯಾಗಿ ಸ್ಥಳೀಯರು ತೊಂದರೆ ಅನುಭವಿಸುವಂತಾಗಿದೆ.

ಬೀದಿ ನಾಯಿಗಳು ಆಹಾರಕ್ಕಾಗಿ ತ್ಯಾಜ್ಯದ ರಾಶಿಯನ್ನು ಚೆಲ್ಲಾಪಿಲ್ಲಿಯಾಗಿ ಮಾಡುತ್ತಿದ್ದು, ಚೆದುರಿ ಬಿದ್ದ ತ್ಯಾಜ್ಯವೆಲ್ಲ ಮಳೆ ಸುರಿದಾಗ ಚರಂಡಿ ಸೇರುತ್ತಿದೆ. ಇದರಿಂದ ಸ್ಥಳೀಯರಿಗೆ ದುರ್ವಾಸನೆ, ಸೊಳ್ಳೆಗಳ ಕಾಟ ಹೆಚ್ಚಿದೆ. ಆರೋಗ್ಯದ ಮೇಲೂ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ನಗರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ, ತ್ಯಾಜ್ಯ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.

ಮಂಜುಳಾ, ಸ್ಥಳೀಯ ನಿವಾಸಿ ರಸ್ತೆ ಕುಸಿಯುತ್ತಿದೆ ಗಮನಿಸಿ ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನಕ್ಕೆ ಹೋಗುವ ರಸ್ತೆಯಲ್ಲಿ ಅಣಕನೂರು ಗ್ರಾಮ ಬಸ್‌ ನಿಲ್ದಾಣದ ಸಮೀಪದಲ್ಲಿಯೇ ರಸ್ತೆಯಲ್ಲಿಯೇ ದೊಡ್ಡ ಗುಂಡಿಗಳು ಬಿದ್ದಿದ್ದು ಇವುಗಳಲ್ಲಿ ನೀರು ನಿಂತು ರಸ್ತೆಗೆ ಧಕ್ಕೆಯಾಗುತ್ತಿದ್ದು, ಇಲ್ಲಿ ರಸ್ತೆ ಅಡಿ ಇರುವ ಚರಂಡಿಯಲ್ಲಿ ರಸ್ತೆ ಕುಸಿಯುತ್ತಿದೆ.
ಕುಸಿದ ಜಾಗದಲ್ಲಿ ಕಲ್ಲು, ತೆಂಗಿನ ಗರಿಗಳನ್ನು ಇಡಲಾಗಿದೆ. ನಿತ್ಯ ನೂರಾರು ವಾಹನಗಳು, ಸಾವಿರಾರು ಜನರು ಸಂಚರಿಸುವ ಈ ರಸ್ತೆಯಲ್ಲಿ

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.