ADVERTISEMENT

ರಸ್ತೆ ಅಪಘಾತದಲ್ಲಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2017, 6:21 IST
Last Updated 5 ನವೆಂಬರ್ 2017, 6:21 IST

ಶಿಡ್ಲಘಟ್ಟ: ತಾಲ್ಲೂಕಿನ ಜೆ.ವೆಂಕಟಾಪುರ ಬಳಿ ಶನಿವಾರ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬಳುವನಹಳ್ಳಿ ನಿವಾಸಿಗಳಾದ ಭಾಗ್ಯಮ್ಮ(35) ಮತ್ತು ಮುರಳಿ (30) ಎಂಬುವರು ಮೃತಪಟ್ಟಿದ್ದಾರೆ.

ಬಸ್‌ ಚಿಕ್ಕಬಳ್ಳಾಪುರದಿಂದ ಕೋಲಾರ ಕಡೆಗೆ ಹೋಗುತ್ತಿತ್ತು. ಚಾಲಕ ಜೆ.ವೆಂಕಟಾಪುರ ಬಳಿ ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್‌ ಹೊಂಡಾ ಆಕ್ಟೀವ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಭಾಗ್ಯಮ್ಮ ಮತ್ತು ಅವರ ಸಹೋದರ ಮುರುಳಿ ಸ್ಥಳದಲ್ಲಿಯೇ ಮೃತಪಟ್ಟರು. ಭಾಗ್ಯಮ್ಮ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯಲ್ಲಿ ಕಂಪ್ಯೂಟರ್ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.

ಅಪಘಾತವಾಗುತ್ತಿದ್ದಂತೆ ಚಾಲಕ ಬಸ್‌ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯನ್ನು ಖಂಡಿಸಿ ಸ್ಥಳೀಯರು ಬಸ್‌ ಎದುರು ಪ್ರತಿಭಟನೆ ನಡೆಸಿ ಕೆ.ಎಸ್.ಆರ್.ಟಿ.ಸಿ ವಿರುದ್ಧ ಧಿಕ್ಕಾರ ಕೂಗಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.