ADVERTISEMENT

ವಿಮಾನ ಹತ್ತಲಿರುವ ರೈತ ಮಹಿಳೆಯರು

ಸಮಗ್ರ ಕೃಷಿ ಪದ್ಧತಿ ಬೆಳೆ ಬೆಳೆಯುವ ತರಬೇತಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2016, 10:27 IST
Last Updated 26 ಜುಲೈ 2016, 10:27 IST
ಶಿಡ್ಲಘಟ್ಟದ ಮಳ್ಳೂರು ಗ್ರಾಮದಲ್ಲಿ ಭಾನುವಾರ ಭಾರತಾಂಬೆ ರೈತಕೂಟದ ವತಿಯಿಂದ ಆಯೋಜಿಸಿದ್ದ ಅಧ್ಯಯನ ಪ್ರವಾಸದ ಪೂರ್ವಭಾವಿ ಸಭೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದರು
ಶಿಡ್ಲಘಟ್ಟದ ಮಳ್ಳೂರು ಗ್ರಾಮದಲ್ಲಿ ಭಾನುವಾರ ಭಾರತಾಂಬೆ ರೈತಕೂಟದ ವತಿಯಿಂದ ಆಯೋಜಿಸಿದ್ದ ಅಧ್ಯಯನ ಪ್ರವಾಸದ ಪೂರ್ವಭಾವಿ ಸಭೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದರು   

ಶಿಡ್ಲಘಟ್ಟ: ‘ಆಂಧ್ರಪ್ರದೇಶ ಅಂತರರಾಷ್ಟ್ರೀಯ ಬೆಳೆ ಅಧ್ಯಯನ ಸಂಸ್ಥೆ’ ಯ ಕೃಷಿ ತಂತ್ರಜ್ಞಾನ ಮತ್ತು ವಿಸ್ತರಣಾ ಕೇಂದ್ರದಲ್ಲಿ ಅಧ್ಯಯನ ಪ್ರವಾಸಕ್ಕೆ ತಾಲ್ಲೂಕಿನ ರೈತಕೂಟದ ರೈತ ಮಹಿಳೆಯರಿಗೆ ಅನುಮತಿ ದೊರೆತಿದೆ’ ಎಂದು ರೈತಕೂಟಗಳ ಒಕ್ಕೂಟದ ಅಧ್ಯಕ್ಷ ಎಚ್‌.ಜಿ.ಗೋಪಾಲಗೌಡ ತಿಳಿಸಿದರು.

ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಭಾರತಾಂಬೆ ರೈತಕೂಟದ ವತಿಯಿಂದ ಭಾನುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ನೀರಿಲ್ಲದ ಈ ಸಂದರ್ಭದಲ್ಲಿ ಒಣ ಬೇಸಾಯದಲ್ಲಿ ನೀರಿನ ಸದ್ಭಳಕೆ ಹಾಗೂ ಸಮಗ್ರ ಕೃಷಿ ಪದ್ಧತಿಯಲ್ಲಿ ಬೆಳೆ ಬೆಳೆಯುವ ಸಲುವಾಗಿ ತೆಲಂಗಾಣ ರಾಜ್ಯಕ್ಕೆ ತೆರಳಲು 38  ರೈತ ಮಹಿಳೆಯರು ಹಾಗೂ 12 ಮಂದಿ ಪ್ರಗತಿಪರ ರೈತರಿಗೆ ಅಧ್ಯಯನಕ್ಕಾಗಿ ಅನುಮತಿ ದೊರೆತಿದೆ’ ಎಂದು ಹೇಳಿದರು.

ವಿಶೇಷವೆಂದರೆ ಎಂದೂ ವಿಮಾನದಲ್ಲಿ ಪ್ರಯಾಣ ಮಾಡದ 38 ಮಂದಿ ರೈತ ಮಹಿಳೆಯರು ಜುಲೈ 27 ರಂದು ವಿಮಾನದಲ್ಲಿ ಹೈದರಾಬಾದಿಗೆ ಪ್ರಯಾಣ ಬೆಳೆಸಲಿದ್ದಾರೆ.
ಅಧ್ಯಯನ ಪ್ರವಾಸ ಮುಗಿಸಿಕೊಂಡು ಜುಲೈ 30ರಂದು ರೈಲಿನಲ್ಲಿ ಹಿಂದಿರುಗಲಿದ್ದಾರೆ’ ಎಂದು ತಿಳಿಸಿದರು.

ಭಾರತಾಂಬೆ ರೈತಕೂಟದ ಅಧ್ಯಕ್ಷೆ ಕಾಚಹಳ್ಳಿ ರತ್ನಮ್ಮ, ಮಳ್ಳೂರು ವನಿತಾ, ಲಲಿತಮ್ಮ, ನಳಿನಿ, ಸುಜಾತಾ, ಸಂಪಂಗಮ್ಮ, ಸರೋಜಮ್ಮ, ಶ್ಯಾಮಲಾ, ನಿರ್ಮಲಮ್ಮ, ಅಮೃತ, ರತ್ನಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.