ADVERTISEMENT

24ರಿಂದ ಇತಿಹಾಸ ಕಾಂಗ್ರೆಸ್‌ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 8:25 IST
Last Updated 21 ಮಾರ್ಚ್ 2018, 8:25 IST

ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಇತಿಹಾಸ ವಿಭಾಗ, ರಾಜ್ಯ ಪತ್ರಾಗಾರ ಇಲಾಖೆ ಬೆಂಗಳೂರು, ರಾಜ್ಯ ಪುರಾತತ್ವ ಮತ್ತು ಪರಂಪರೆ ಇಲಾಖೆ ಮೈಸೂರು ವತಿಯಿಂದ ಮಾರ್ಚ್‌ 24ರಿಂದ 3 ದಿನಗಳ ಕಾಲ ಕರ್ನಾಟಕ ಇತಿಹಾಸ ಕಾಂಗ್ರೆಸ್‌ನ 27ನೇ ಅಧಿವೇಶನ/ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಯೋಜಿಸಲಾಗಿದೆ ಎಂದು ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ.ಎನ್‌.ರಘು ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಕರ್ನಾಟಕದ ಸಂಸ್ಕೃತಿ, ಸಮಾಜ, ಶಿಕ್ಷಣ, ಪರಂಪರೆ, ಆರ್ಥಿಕತೆ, ರಾಜಕೀಯ ಇತಿಹಾಸ ಹಾಗೂ ಸಮಕಾಲೀನ ಸಮಸ್ಯೆಗಳ ಬಗ್ಗೆ ಸಂಶೋಧನಾ ಪ್ರಬಂಧಗಳನ್ನು ಸಂಶೋಧಕರು ಮಂಡಿಸುತ್ತಾರೆ ಎಂದು ತಿಳಿಸಿದರು.

ಪ್ರಾಂಶುಪಾಲ ಪ್ರೊ.ವಿ. ರಾಮಕೃಷ್ಣಪ್ಪ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.