ADVERTISEMENT

‘ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರಾಬಲ್ಯ’

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 10:08 IST
Last Updated 17 ಮಾರ್ಚ್ 2018, 10:08 IST

ಚಿಕ್ಕಮಗಳೂರು: ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮೆರೆದಿದ್ದಾರೆ. ಧೈರ್ಯ, ಬುದ್ಧಿವಂತಿಕೆ, ದೃಢಸಂಕಲ್ಪದಿಂದ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಎಐಟಿಯುಸಿ ಮಹಿಳಾ ಘಟಕದ ಅಧ್ಯಕ್ಷೆ ರಾಧಾ ಸುಂದರೇಶ್ ಹೇಳಿದರು.

ನಗರದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಘಟಕದಲ್ಲಿ ಈಚೆಗೆ ಏರ್ಪಡಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ರಾಜಕೀಯ, ಸಿನಿಮಾ, ಉದ್ಯಮ, ತಂತ್ರಜ್ಞಾನ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಚಾಲಕಿ ಯರಾಗಿ ಮತ್ತು ನಿರ್ವಾಹಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಿ ಳೆಯರ ಸಾಮರ್ಥ್ಯ, ದಿಟ್ಟತನ ಮೆಚ್ಚ ಬೇಕು. ಅವರನ್ನು ಗೌರವಿಸಬೇಕು ಎಂದರು.

ಸವಲತ್ತುಗಳನ್ನು ಬಳಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಬೇಕು. ಪ್ರತಿಭೆಯನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ADVERTISEMENT

ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯತ್ರಾಣಾಧಿಕಾರಿ ಅನಿಲ್‌ಕುಮಾರ್‌, ಅರುಣ್, ದೊಡ್ಡಮನಿ, ಸುನೀತಾ, ಬೇಬಿಬಾಯಿ ಇದ್ದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.