ಕಳಸ: ಕಳಸ ತಾಲ್ಲೂಕು ರಚನೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕ ಸಂಸದ ಎಚ್.ಡಿ.ದೇವೇಗೌಡ ಅವರಿಗೆ ಮನವಿ ಮಾಡಿದೆ.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜನ್ ಅಜಿತ್ಕುಮಾರ್, ರಾಜ್ಯ ಯುವ ಜನತಾದಳ ಕಾರ್ಯದರ್ಶಿ ಸುನಿಲ್ ಬೋಸ್ ಮತ್ತು ಬಲಿಗೆಯ ಪ್ರಸಾದ್ ಜೈನ್ ದೇವೇಗೌಡ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದರು.
‘ ಒಂದು ಗಂಟೆ ಕಾಲ ನಮ್ಮ ಮನವಿ ಆಲಿಸಿದ ದೇವೇಗೌಡರು ಕಳಸ ತಾಲ್ಲೂಕು ಬಗ್ಗೆ ಮುಖ್ಯಮಂತ್ರಿ ಬಳಿ ಚರ್ಚಿಸುತ್ತೇನೆ ಎಂಬ ಭರವಸೆ ನೀಡಿದರು’ ಎಂದು ಸಭೆಯಲ್ಲಿ ಭಾಗವಹಿಸಿದ್ದ ಪ್ರಸಾದ್ ಜೈನ್ ತಿಳಿಸಿದ್ದಾರೆ.
ಕಳಸದ ಇನಾಂ ಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ. ಆ ಬಗ್ಗೆ ಜನರು ಭಯಪಡುವುದು ಬೇಡ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ಒಂದು ತಿಂಗಳಲ್ಲಿ ಜಿಲ್ಲಾ ಪ್ರವಾಸ ಮಾಡುವುದಾಗಿಯೂ ದೇವೇಗೌಡ ಹೇಳಿದರು ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.