ADVERTISEMENT

ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ ಇಂದು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2017, 7:52 IST
Last Updated 17 ಏಪ್ರಿಲ್ 2017, 7:52 IST

ಕೊಪ್ಪ : ಮಲೆನಾಡಿನ ಜನತೆಗೆ ಮಾರಕ ವಾಗಿ ಪರಿಣಮಿಸಲಿರುವ ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸು ವುದನ್ನು ವಿರೋಧಿಸಿ ತಾಲ್ಲೂಕಿನ ಹಿರೇ ಕೊಡಿಗೆ, ಹರಂದೂರು ಮತ್ತು ಕೆಸವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸ್ಥರು ಹಾಗೂ ಪಟ್ಟಣದ ನಾಗರೀಕರ ವತಿಯಿಂದ ಇದೇ 17ರ ಸೋಮವಾರ ಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10ಕ್ಕೆ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಪ್ರತಿಭಟನಾಕಾರರು ಸಮಾವೇಶ ಗೊಂಡು, ಬಸ್‍ನಿಲ್ದಾಣದ ಮಾರ್ಗವಾಗಿ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಲಿದ್ದು, ಅಲ್ಲಿ ಬಹಿರಂಗ ಸಭೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT