ADVERTISEMENT

‘ಪರಿವರ್ತನಾ ಯಾತ್ರೆ’ ಕೊಪ್ಪಕ್ಕೆ ಇಂದು

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2017, 9:03 IST
Last Updated 29 ಡಿಸೆಂಬರ್ 2017, 9:03 IST

ಕೊಪ್ಪ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ನವ ಕರ್ನಾಟಕಕ್ಕಾಗಿ ಪರಿವರ್ತನಾ ಯಾತ್ರೆ’ ಶುಕ್ರವಾರ ಮಧ್ಯಾಹ್ನ 2.30ಕ್ಕೆ ಕೊಪ್ಪಕ್ಕೆ ಬರಲಿದೆ.

ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ಪುರಸಭಾ ಕ್ರೀಡಾಂಗಣದಲ್ಲಿ ಶೃಂಗೇರಿ ಕ್ಷೇತ್ರ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರದ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ರಾಜ್ಯ ಬಿಜೆಪಿ ನಾಯಕರಾದ ಕೆ.ಎಸ್. ಈಶ್ವರಪ್ಪ, ಅರವಿಂದ ಲಿಂಬಾವಳಿ, ಸಿ.ಟಿ. ರವಿ, ಜಯಪ್ರಕಾಶ್ ಹೆಗ್ಡೆ, ಸ್ಥಳೀಯ ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಇನ್ನಿತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದ ಪೂರ್ವ ಸಿದ್ಧತೆ ಭರದಿಂದ ಸಾಗಿದ್ದು, ಪಟ್ಟಣದ ತುಂಬ ಬಿಜೆಪಿ ಬಾವುಟ, ಬ್ಯಾನರ್, ಬಂಟಿಂಗ್ಸ್‌ಗಳನ್ನು ಕಟ್ಟಲಾಗಿದೆ. ಪುರಸಭಾ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಳ್ಳುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.