ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಇದೇ 8 ಮತ್ತು 9ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕುಂದೂರು ಅಶೋಕ್ ಇಲ್ಲಿ ಬುಧವಾರ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ರೋಷನ್ ಬೇಗ್ ಅವರು ಸಮ್ಮೇಳನದ ಉದ್ಘಾಟಿಸುವರು. ಜಿಲ್ಲೆಯ ಹಿರಿಯ ಸಾಹಿತಿ ಪ್ರೊ.ಓಂಕಾರಪ್ಪ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ.ರವಿ, ಅರಣ್ಯವಸತಿ ಮತ್ತು ವಿಹಾರಧಾಮ ನಿಗಮ ಅಧ್ಯಕ್ಷ ಎ.ಎನ್.ಮಹೇಶ್, ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿಕೃಷ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದ ವೇದಿಕೆಗೆ ಮಹಾಕವಿ ಲಕ್ಷ್ಮೀಶ ಅವರ ಹೆಸರಿಟ್ಟಿದ್ದು, ಮೆರವಣಿಗೆ ಮೂಲಕ ಸಮ್ಮೇಳನ ಅಧ್ಯಕ್ಷರನ್ನು ವೇದಿಕೆಗೆ ಕರೆತರಲಾಗುವುದು. ಸ್ತಬ್ದಚಿತ್ರ ಗಳು, ಸ್ತಳೀಯ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಸಮ್ಮೇಳನದಲ್ಲಿ ಬಲ್ಲಾಳೇಶ್ವರ ಮಹಾ ಮಂಟಪ ನಿರ್ಮಾಣ ಮಾಡ ಲಾಗಿದೆ. ಅದರಲ್ಲಿ 1500 ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಸಮ್ಮೇಳನದಲ್ಲಿ ಏಳು ಗೋಷ್ಠಿಗಳು ನಡೆಯಲಿದ್ದು, ಸ್ಥಳೀಯ ಕೃಷಿ, ನೀರಾವರಿ, ಪರಿಸರ ಸಮಸ್ಯೆ, ಭಾಷೆ, ಶಿಕ್ಷಣ, ಮಾಧ್ಯಮ ಕುರಿತು ಸಂವಾದ ಗೋಷ್ಠಿ ನಡೆಯಲಿವೆ. ಜಿಲ್ಲೆಯ ಸಾಹಿತ್ಯ ಕ್ಷೇತ್ರದ ಸಾಧಕರ ಸ್ಮರಣೆ, ರಂಗಭೂಮಿ, ಜಾನಪದ ವೈಭವ, ವರ್ತಮಾನದ ತಲ್ಲಣಗಳು, ಸ್ತ್ರೀ ಸಂವೇದನೆ ಕುರಿತು ರಾಜನೀತಿ ತಜ್ಞರು ಹಾಗೂ ವಿದ್ವಾಂಸರು ಗೋಷ್ಠಿಗಳಲ್ಲಿ ವಿಚಾರ ಮಂಡಿಸಲಿದ್ದಾರೆ ಎಂದರು.
ಇದೇ 9ರಂದು ಬಹಿರಂಗ ಅಧಿವೇಶನ ಮತ್ತು ಸಮಾರೋಪ ಸಮಾರಂಭ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಕಡೂರು ಶಾಸಕ ವೈ.ಎಸ್.ವಿ ದತ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ರಾಮಸ್ವಾಮಿ ಶೆಟ್ಟಿಗದ್ದೆ, ಸಮಾಜ ಸೇವಕಿ ಗೌರಮ್ಮ ಬಸವೇಗೌಡ, ಮುಖಂಡರಾದ ಎಸ್.ಬಿ. ಪರಮೇಶ್ವರಪ್ಪ, ಎಚ್.ಎಂ.ರೇಣುಕಾರಾಧ್ಯ ಭಾಗವಹಿಸುವರು ಎಂದರು.
ಸಾಣೇಹಳ್ಳಿ ಶಿವಸಂಚಾರ ತಂಡ ದಿಂದ ಸಮ್ಮೇಳನದ ಮೊದಲನೇ ದಿನ ‘ಚೋರ ಚರಣದಾಸ’ ಹಾಗೂ ಎರ ಡನೇ ದಿನ ‘ಮೋಳಿಗೆ ಮಾರಯ್ಯ’ ನಾಟಕ ಪ್ರದರ್ಶನ ನಡೆಯಲಿದೆ.
ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥ, ಚಿಕ್ಕಮ ಗಳೂರು ತಾಲ್ಲೂಕು ಘಟಕದ ಅಧ್ಯಕ್ಷ ಹಿರೇಮ ಗಳೂರು ಪುಟ್ಟಸ್ವಾಮಿ, ಬೆನೆಡಿಕ್ಟ್ ಜೇಮ್ಸ್, ರವಿಪ್ರಕಾಶ್, ಮಹಡಿಮನೆ ಸತೀಶ್, ವಿಜಯ್ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.