ಚಿಕ್ಕಮಗಳೂರು: ತಾಲ್ಲೂಕಿನ ಸಿಂದಿಗೆರೆ ಗ್ರಾಮದ ರಂಗಸ್ವಾಮಿ (58) ಅವರನ್ನು ಕತ್ತಿಯಿಂದ ಹಲ್ಲೆ ಮಾಡಿ ಗುರುವಾರ ಹತ್ಯೆ ಮಾಡಲಾಗಿದೆ.
ರಾತ್ರಿ 8.30ರ ಹೊತ್ತಿಗೆ ಗ್ರಾಮದಲ್ಲಿ ಹತ್ಯೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಕ ರಾಮ ಶೆಟ್ಟಿ ಮತ್ತು ರಂಗಸ್ವಾಮಿಗೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ರಾಮ ಶೆಟ್ಟಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯವು ಗ್ರಾಮವನ್ನು ಬೆಚ್ಚಿಬೀಳಿಸಿದೆ.
ರಾಮ ಶೆಟ್ಟಿ ತಲೆಮರೆಸಿ ಕೊಂಡಿದ್ದಾರೆ. ಪೊಲೀಸರು ಶೋಧ ಆರಂಭಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.