ADVERTISEMENT

ಹಿರಿಯೂರು: ಅಗ್ನಿ ಆಕಸ್ಮಿಕ; 11 ಗುಡಿಸಲು ಭಸ್ಮ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 7:08 IST
Last Updated 23 ಏಪ್ರಿಲ್ 2017, 7:08 IST

ಹಿರಿಯೂರು: ತಾಲ್ಲೂಕಿನ ಜವನಗೊಂಡನಹಳ್ಳಿಯ ಸುವರ್ಣಮುಖಿ ಬಡಾವಣೆಯಲ್ಲಿ ಶನಿವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 11 ಗುಡಿಸಲುಗಳು  ಭಸ್ಮವಾಗಿದ್ದು, ₹ 5 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.ಗುಡಿಸಲುಗಳಲ್ಲಿ ವಾಸಿಸುತ್ತಿದ್ದವರೆಲ್ಲ ಕೂಲಿ ಕಾರ್ಮಿಕರಾಗಿದ್ದು, ಬೆಳಿಗ್ಗೆ ಎಲ್ಲರೂ ಕೆಲಸಕ್ಕೆ ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಗುಡಿಸಲುಗಳಲ್ಲಿದ್ದ ದಿನಬಳಕೆಯ ವಸ್ತುಗಳು ಸುಟ್ಟುಹೋಗಿವೆ ಎಂದು ಪ್ರತ್ಯಕ್ಷದರ್ಶಿಗಳು ಸುದ್ದಿಗಾರರಿಗೆ ತಿಳಿಸಿದರು. 

ರಾಮಣ್ಣ, ಬೀಬಿಜಾನ್, ಉಷಾದೇವಿ, ರವಿ, ಮಂಜಮ್ಮ, ಕೃಷ್ಣಪ್ಪ, ಲಕ್ಷ್ಮಿದೇವಿ,  ಪುಟ್ಟಜ್ಜಿ, ಭಾಗ್ಯಮ್ಮ, ರಕ್ಷಿತಾ, ಗಿರಿಜಮ್ಮ ಗುಡಿಸಲುಗಳನ್ನು ಕಳೆದುಕೊಂಡಿರುವ ಸಂತ್ರಸ್ತರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.