ADVERTISEMENT

ಹೊಸದುರ್ಗ: ಮನೆ ಮನೆಗೆ ಕುಮಾರಣ್ಣ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2017, 6:21 IST
Last Updated 7 ನವೆಂಬರ್ 2017, 6:21 IST

ಹೊಸದುರ್ಗ: ತಾಲ್ಲೂಕಿನ ಲಕ್ಕಿಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮಕ್ಕೆ ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಈ.ನಂದೀಶ್‌ ಚಾಲನೆ ನೀಡಿದರು.

‘ನಾಡಿನ ಭಾಷೆ, ನೆಲ, ಜಲ, ಸಂಸ್ಕೃತಿಯ ಸಂರಕ್ಷಣೆಯ ಜತೆಗೆ ದಲಿತರು, ಬಡವರು, ರೈತರು ಸೇರಿದಂತೆ ಎಲ್ಲಾ ವರ್ಗದ ಹಿತ ಕಾಪಾಡಲು 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅನ್ನು ಅಧಿಕಾರಕ್ಕೆ ತರಬೇಕು. ಆ ಮೂಲಕ ಮತ್ತೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು’ ಎಂದು ಈ.ನಂದೀಶ್‌ ಮನವಿ ಮಾಡಿದರು.

ಕುಮಾರಸ್ವಾಮಿ ಅಧಿಕಾರದ ಅವಧಿಯಲ್ಲಿ ಜಾರಿಗೊಳ್ಳಿಸಿದ್ದ ಜನಪರ ಕಾರ್ಯಕ್ರಮಗಳ ಮಾಹಿತಿಯ ಕಿರುಹೊತ್ತಿಗೆಯನ್ನು ಮನೆ ಮನೆಗೆ ತೆರಳಿ ವಿತರಿಸಿದರು. ಜೆಡಿಎಸ್‌ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಾ.ಮೈಲಾರಪ್ಪ, ನಗರ ಘಟಕದ ಅಧ್ಯಕ್ಷ ಗಣೇಶ್‌, ಯುವ ಘಟಕದ ಅಧ್ಯಕ್ಷ ಬಸವರಾಜು, ಹೇರೂರು ಪ್ರಕಾಶ್‌, ನಾಗಪ್ಪ, ಶಿವಲಿಂಗಪ್ಪ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.