ADVERTISEMENT

ಉಳ್ಳಾಲ: 80 ಕುಟುಂಬಗಳನ್ನು ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2017, 4:41 IST
Last Updated 4 ಡಿಸೆಂಬರ್ 2017, 4:41 IST
ಒಖಿ ಚಂಡಾಮಾರುತದ ದುಷ್ಪರಿಣಾಮ ಉಳ್ಳಾಲ ವ್ಯಾಪ್ತಿಯ ಸಮುದ್ರ ತೀರದಲ್ಲಿ ಹಲವು ಮನೆಗಳಿಗೆ ಹಾಗೂ ಸೊತ್ತುಗಳಿಗೆ ಹಾನಿಯಾಗಿದ್ದು, ಸಚಿವ ಯು.ಟಿ. ಖಾದರ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾನುವಾರ ವೀಕ್ಷಿಸಿದರು.
ಒಖಿ ಚಂಡಾಮಾರುತದ ದುಷ್ಪರಿಣಾಮ ಉಳ್ಳಾಲ ವ್ಯಾಪ್ತಿಯ ಸಮುದ್ರ ತೀರದಲ್ಲಿ ಹಲವು ಮನೆಗಳಿಗೆ ಹಾಗೂ ಸೊತ್ತುಗಳಿಗೆ ಹಾನಿಯಾಗಿದ್ದು, ಸಚಿವ ಯು.ಟಿ. ಖಾದರ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾನುವಾರ ವೀಕ್ಷಿಸಿದರು.   

ಉಳ್ಳಾಲ: ಒಖಿ ಚಂಡಮಾರುತದ ಪ್ರಭಾವಕ್ಕೆ ಇಲ್ಲಿನ ಸಮುದ್ರದ ಉಬ್ಬರದಿಂದ ಸೋಮೇಶ್ವರ, ಉಳ್ಳಾಲ, ಉಚ್ಚಿಲ, ಮೊಗವೀರಪಟ್ನ, ಖಿಲಿರಿಯಾನಗರ ಮುಂತಾದ ಪ್ರದೇಶಗಳಲ್ಲಿ ಶನಿವಾರ ರಾತ್ರಿ 9 ರಿಂದ ಭಾನುವಾರ ನಸುಕಿನ 3 ಗಂಟೆಯವರೆಗೆ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಗಡಿ ಪ್ರದೇಶ ತಲಪಾಡಿಯಿಂದ ಉಳ್ಳಾಲದವರೆಗೆ ಸಮುದ್ರ ತೀರದಲ್ಲಿ ನೆಲೆಸಿದ್ದ ಸುಮಾರು 80 ಕುಟುಂಬಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.

‘ಸೋಮೇಶ್ವರ ಭಾಗದಲ್ಲಿ ಸಾಮಾನ್ಯವಾಗಿ ಮಳೆಗಾಲದಲ್ಲಿ ಮಾತ್ರ  ಕಡಲ್ಕೊರೆತ, ಸಮುದ್ರದ ಪ್ರಕೋಪ ಇರುತ್ತದೆ. ಕಡಲ್ಕೊರೆತ ತಡೆಯಲು ಶೀಘ್ರವೇ ಕಲ್ಲುಗಳನ್ನು ಮತ್ತೆ ಜೋಡಿಸುವ, ತಾತ್ಕಾಲಿಕ ತಡೆ ಕಾಮಗಾರಿಯನ್ನು ನಡೆಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸಮುದ್ರದ ವಿಕೋಪ ಭಾನುವಾರ ರಾತ್ರಿ 12 ರವರೆಗೆ ಇರುವುದರಿಂದ ಸಮುದ್ರ ತೀರದವರು ಸ್ಥಳಾಂತರವಾಗಬೇಕಿದೆ’ ಎಂದು ತಹಶೀಲ್ದಾರ್ ಗುರುಪ್ರಸಾದ್ ತಿಳಿಸಿದ್ದಾರೆ.

ADVERTISEMENT

ಸಚಿವ ಖಾದರ್‌ ಭೇಟಿ

ಅಪಾಯದಂಚಿನಲ್ಲಿರುವ ಮನೆಗಳ ಸಂರಕ್ಷಣೆಗೆ ತಾತ್ಕಾಲಿಕ ಕಾಮಗಾರಿ ಶೀಘ್ರವೇ ನಡೆಸಲಾಗುವುದು ಎಂದು ಸಚಿವ ಖಾದರ್ ಹೇಳಿದ್ದಾರೆ. ಅವರು ಓಖಿ ಚಂಡಾಮಾರುತದ ಪರಿಣಾಮ ಉಳ್ಳಾಲ, ಸೋಮೇಶ್ವರ ವ್ಯಾಪ್ತಿಯಲ್ಲಿ ಹಾನಿಗೀಡಾದ ಪ್ರದೆಶಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದರು.

‘ತಮಿಳುನಾಡು, ಕೇರಳ ಸೇರಿದಂತೆ ದೇಶದ  ಕರಾವಳಿ ಭಾಗದಲ್ಲಿ ಹಾನಿ ಮಾಡಿದ ಓಖಿ ಚಂಡಾಮಾರುತದ ದುಷ್ಪರಿಣಾಮ ಉಳ್ಳಾಲ ವ್ಯಾಪ್ತಿಯಲ್ಲಿಯೂ ಹಲವು ಮನೆಗಳಿಗೆ ಹಾಗೂ ಸೊತ್ತುಗಳಿಗೆ ಹಾನಿಯಾಗಿದೆ. ದೇವರ ದಯೆಯಿಂದ ಕಡಿಮೆ ಪ್ರಮಾಣದಲ್ಲಿ ಆಗಿದೆ. 

ಹವಾಮಾನ ಇಲಾಖೆಯ ವರದಿಯಂತೆ ಚಂಡಾಮಾರುತದ ಪ್ರಭಾವ ಇನ್ನಷ್ಟು ಕಡಿಮೆಯಾಗಲಿದೆ ಅನ್ನುವ ಮಾಹಿತಿ ದೊರೆತಿದೆ. ಉಳ್ಳಾಲ ಭಾಗದಲ್ಲಿ ಆತಂಕಿತರಾದ ಜನತೆಗೆ ಜಿಲ್ಲಾಡಳಿತ ನಿನ್ನೆ ರಾತ್ರಿಯಿಂದ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ. ಅಲ್ಲದೆ ಸ್ಥಳಾಂತರಕ್ಕೆ ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ’ ಎಂದರು.

ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್, ಸಹಾಯಕ ಆಯುಕ್ತ ಕುಮಾರನ್, ತಹಶೀಲ್ದಾರ್ ಗುರುಪ್ರಸಾದ್, ಉಳ್ಳಾಲ ನಗರಸಭೆ ಪೌರಾಯುಕ್ತೆ ವಾಣಿ ಆಳ್ವ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಗರಸಭೆ ಸದಸ್ಯರು  ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.