‘ಕೋಮುವಾದಿಗಳನ್ನು ಬೆಂಬಲಿಸುವುದಿಲ್ಲ’ ಮಂಗಳೂರು: ‘ಹಿಂದೂ ಕೋಮುವಾದಿಗಳಿರಲಿ, ಮುಸ್ಲಿಂ ಕೋಮುವಾದಿಗಳಿರಲಿ ಯಾರನ್ನೂ ನಾವು ಬೆಂಬಲಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಖಾಸಗಿ ಭೇಟಿಗಾಗಿ ಭಾನುವಾರ ಸಂಜೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಪಾಪ್ಯಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕೋಮುವಾದಿ ಚಟುವಟಿಕೆಗಳಿಗೆ ಮುಖ್ಯಮಂತ್ರಿ ನೇರವಾಗಿ ಬೆಂಬಲ ನೀಡುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.
‘ನಾನು, ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ಕೋಮುವಾದದ ವಿರುದ್ಧ ಇದ್ದೇವೆ. ಸ್ಪಷ್ಟವಾಗಿ ಇದನ್ನು ಹಲವು ಬಾರಿ ಹೇಳಿದ್ದೇವೆ. ಯಾವುದೇ ಧರ್ಮದ ಕೋಮುವಾದಿಗಳಿದ್ದರೂ ನಾವು ಅವರನ್ನು ವಿರೋಧಿಸುತ್ತೇವೆ. ಕೋಮುವಾದಿಗಳನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಇಂತಹ ಆರೋಪಗಳನ್ನು ಮಾಡುತ್ತಿರುತ್ತಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.