ADVERTISEMENT

ರೌಡಿಶೀಟರ್‍‍ನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2017, 10:12 IST
Last Updated 25 ಜುಲೈ 2017, 10:12 IST
ವಾಮಂಜೂರು ಪವನ್ ರಾಜ್ ಶೆಟ್ಡಿ
ವಾಮಂಜೂರು ಪವನ್ ರಾಜ್ ಶೆಟ್ಡಿ   

ಮಂಗಳೂರು: ನಗರದ ಕುಟ್ಟಿಪಲ್ಕೆ ಎಂಬಲ್ಲಿ ಸೋಮವಾರ ತಡರಾತ್ರಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕೆಲವು ವರ್ಷಗಳ ಹಿಂದೆ ಕೊಲೆಗೀಡಾಗಿದ್ದ ರೌಡಿ ವಾಮಂಜೂರು ರೋಹಿ ಮಗ ಪವನ್ ರಾಜ್ ಶೆಟ್ಟಿ (22) ಕೊಲೆಯಾದವರು.

ಕುಟ್ಟಿಪಲ್ಕೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ಬಳಿ ನಾಲ್ವರು ದುಷ್ಕರ್ಮಿಗಳ ತಂಡ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದೆ. ಪವನ್ ರಾಜ್ ವಿರುದ್ದ ಹಲವು ಪ್ರಕರಣಗಳಿದ್ದು, ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT