ಉಳ್ಳಾಲ: ಇಲ್ಲಿಗೆ ಸಮೀಪದ ಮುಕ್ಕಚ್ಚೇರಿ ಸೀಗ್ರೌಂಡ್ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಮುದ್ರಕ್ಕೆ ಸ್ನಾನಕ್ಕಿಳಿದಿದ್ದ ಹನೀಫ್ ಮಾಸ್ತಿಕಟ್ಟೆ (35) ಎಂಬುವರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಹನೀಫ್ ಅವರು ಮಾಸ್ತಿ ಕಟ್ಟೆ ನಿವಾಸಿ. ಬಿಸಿಲಿನಿಂದಾಗಿ ಮೈಯಲ್ಲಿ ಹುಣ್ಣಾಗಿತ್ತು ಎಂದು ಉಪ್ಪು ನೀರಿನ ಸ್ನಾನಕ್ಕೆಂದು ಬೆಳಿಗ್ಗೆ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿ ಸಮುದ್ರದ ಪಾಲಾಗಿದ್ದಾರೆ. ಸ್ಥಳೀಯರು ಶೋಧ ಕಾರ್ಯ ಮಂದುವರಿಸಿದ್ದಾರೆ. ಹನೀಫ್ ಅವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.