ADVERTISEMENT

ಸಿಪಿಎಂ ರಾಜ್ಯ ಸಮ್ಮೇಳನ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2017, 10:28 IST
Last Updated 30 ನವೆಂಬರ್ 2017, 10:28 IST
ಸೀತಾರಾಮ ಯಚೂರಿ
ಸೀತಾರಾಮ ಯಚೂರಿ   

ಮಂಗಳೂರು: ಸಿಪಿಎಂ ರಾಜ್ಯ ಸಮ್ಮೇಳನವು ಡಿಸೆಂಬರ್ 2ರಿಂದ 5ರವರೆಗೆ ಮೂಡುಬಿದಿರೆಯಲ್ಲಿ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಮ್ಮೇಳನದ ‌ಸ್ವಾಗತ ಸಮಿತಿ ‌ಅಧ್ಯಕ್ಷ ಕೆ.ಆರ್. ಶ್ರೀಯಾನ್, ಸಮ್ಮೇಳನವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯಚೂರಿ ಉದ್ಘಾಟಿಸಲಿದ್ದಾರೆ. ಪಾಲಿಟ್ ಬ್ಯುರೋ ಸದಸ್ಯರಾದ ರಾಮಚಂದ್ರ ಪಿಳ್ಳೆ, ಎಂ.ಎ. ಬೇಬಿ, ರಾಘವಲು ಭಾಗವಹಿಸಲಿದ್ದಾರೆ ಎಂದರು.

ನಾಲ್ಕು ದಿನದ ಸಮ್ಮೇಳನದಲ್ಲಿ ಕಾರ್ಮಿಕ ವರ್ಗದ ಹಿತರಕ್ಷಣೆ, ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನೀತಿ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ಕುರಿತು ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.