ADVERTISEMENT

‘ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’

ಹೋಬಳಿ ಮಟ್ಟದಲ್ಲಿ ರಾಜ್ಯದ ಪ್ರಥಮ ಇಂದಿರಾ ಕ್ಯಾಂಟೀನ್ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 8:03 IST
Last Updated 23 ಮಾರ್ಚ್ 2018, 8:03 IST
ಉಳ್ಳಾಲ ಪುರಸಭೆ ವ್ಯಾಪ್ತಿಯ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಗುರುವಾರ ಆರಂಭವಾದ 'ಇಂದಿರಾ ಕ್ಯಾಂಟಿನ್' ಅನ್ನು ಜನರಿಗೆ ಊಟ ನೀಡುವ ಮೂಲಕ ಸಚಿವ ಯು.ಟಿ. ಖಾದರ್‌ ಉದ್ಘಾಟಿಸಿದರು.
ಉಳ್ಳಾಲ ಪುರಸಭೆ ವ್ಯಾಪ್ತಿಯ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಗುರುವಾರ ಆರಂಭವಾದ 'ಇಂದಿರಾ ಕ್ಯಾಂಟಿನ್' ಅನ್ನು ಜನರಿಗೆ ಊಟ ನೀಡುವ ಮೂಲಕ ಸಚಿವ ಯು.ಟಿ. ಖಾದರ್‌ ಉದ್ಘಾಟಿಸಿದರು.   

ಉಳ್ಳಾಲ: ‘ರಾಜ್ಯದಲ್ಲಿ ಶೇಖರಣೆಯಾದ ಸಂಪತ್ತನ್ನು ಕೆಲವರು ಮಾತ್ರ ಬಳಸಿಕೊಳ್ಳುವುದು ಬೇಡ, ಅದು ಎಲ್ಲ ವರ್ಗದ ಎಲ್ಲರಿಗೂ ಸಿಗಬೇಕು ಎಂಬ ದೆಸೆಯಿಂದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ  ಮೊದಲ ಬಾರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಹೋಬಳಿ ಮಟ್ಟದಲ್ಲಿ ರಾಜ್ಯದ ಪ್ರಥಮ, ಉಳ್ಳಾಲ ಪುರಸಭೆ ವ್ಯಾಪ್ತಿಯ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ 'ಇಂದಿರಾ ಕ್ಯಾಂಟಿನ್'ಅನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಕಡಿಮೆ ವೇತನಕ್ಕೆ ದುಡಿಯುವವರ ಹೊಟ್ಟೆ ತುಂಬಬೇಕು. ಆಹಾರದಲ್ಲಿ ಗುಣಮಟ್ಟದ ಕಾಪಾಡಲಾಗಿದೆ. ಈ ಭಾಗದಲ್ಲಿ ಕುಚಲ ಅಕ್ಕಿ, ಪಲ್ಯ, ಉಪ್ಪಿನ ಕಾಯಿ ಜತೆ ಅನ್ನ ಸಾಂಬಾರು ಒದಗಿಸಲಿದ್ದಾರೆ. ಇಮೋಫೇಲಿಯಾಕ್ಕೆ ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಉಚಿತ ಹಾಗೂ ಎಪಿಎಲ್ ಶೇ70 ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಯೋಜನೆ ಜಾರಿಗೆ ತರಲಾಗಿದೆ. ಅಪಘಾತಕ್ಕೀಡಾದವರಿಗೆ ಹರೀಶ್ ಸಾಂತ್ವನ ಯೋಜನೆಯಡಿಯಲ್ಲಿ ವ್ಯಕ್ತಿಯ ಎರಡು ದಿನಗಳ ಚಿಕಿತ್ಸೆಗಾಗಿ ₹ 25 ಸಾವಿರ ತಕ್ಷಣವೇ ಪರಿಹಾರ ರೂಪದಲ್ಲಿ ಕೊಡುವ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಹೇಳಿದರು.

ADVERTISEMENT

₹ 500 ವಿದ್ಯುತ್ ಬಿಲ್ ಗೆ ಎಪಿಎಲ್ ಪಡಿತರ ಚೀಟಿ ಅನ್ವಯ ಎಂಬ ಕಾನೂನನ್ನು ನಿಲ್ಲಿಸಲಾಗಿದೆ. ₹1.20 ಲಕ್ಷ ಆಧಾರದಲ್ಲಿ ಪಡಿತರ ಚೀಟಿ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಯಾವುದೇ ದಾಖಲಾತಿಗಿಂತ ಆಧಾರ್ ಕಾರ್ಡ್ ಹೊಂದಿದ್ದರಿಗೆ ರಸ್ತೆ ಬದಿಯಲ್ಲಿದ್ದರೂ ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಕ್ಪ್ ಜಿಲ್ಲಾ ಘಟಕದ ಅಧ್ಯಕ್ಷ ಯು.ಕೆ . ಮೋನು, ಅಲ್ಪಸಂಖ್ಯಾತ ನಿಗಮ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಎಸ್. ಕರೀಂ, ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ಮೋನು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ನಗರ ಸಭೆಯ ಅಧ್ಯಕ್ಷ ಹುಸೇನ್ ಕುಂಞ ಮೋನು, ಉಪಾಧ್ಯಕ್ಷೆ ಚಿತ್ರಾ ಚಂದ್ರಕಾಂತ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜೇನ್ ಶಾಂತಿ ಡಿಸೋಜ, ಸದಸ್ಯರಾದ ಫಾರೂಕ್ ಉಳ್ಳಾಲ್, ಸರಿತಾ ಜೀವನ್ ತೊಕ್ಕೊಟ್ಟು, ಶಶಿಕಲಾ ಶೆಟ್ಟಿ,ಮೊಹಮ್ಮದ್ ಮುಕ್ಕಚ್ಚೇರಿ, ಬಾಜಿಲ್ ಡಿಸೋಜ, ಪ್ರೊ.ಡಿ ಮೋನು, ಉಸ್ಮಾನ್ ಕಲ್ಲಾಪು, ಸುಂದರ ಉಳಿಯ, ಸುಕುಮಾರ್, ರಝಿಯಾ ಇಬ್ರಾಹಿಂ, ಭಾರತಿ, ರಾಜ್ಯ ಆಹಾರ ನಿಗಮದ ಸದಸ್ಯ ಟಿ.ಎಸ್. ಅಬ್ದುಲ್ಲಾ, ಕೆಎಸ್‍ಆರ್ ಟಿಸಿ ನಿಮಗದ ಸದಸ್ಯ ರಮೇಶ್ ಶೆಟ್ಟಿ ಬೋಳಿಯಾರು, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸಿದ್ದಿಕ್ ತಲಪಾಡಿ, ಜಬ್ಬಾರ್ ಬೋಳಿಯಾರು, ವಿಲ್ಮಾ ಡಿಸೋಜ, ಪದ್ಮಾವತಿ, ರಾಜ್ಯ ಚುನಾವಣೆ ಪ್ರಚಾರ ಸಮಿತಿ ಸದಸ್ಯ ಈಶ್ವರ ಉಳ್ಳಾಲ್, ನಗರಸಭೆಯ ಪೌರಾಯುಕ್ತೆ ವಾಣಿ ವಿ. ಆಳ್ವ, ಮಾಜಿ ಅಧ್ಯಕ್ಷೆ ಗಿರಿಜಾ ಎಂ. ಬಾಯಿ, ಹಮ್ಮಬ್ಬ, ರವಿ, ಖಾದರ್, ಬಶೀರ್, ರಿಚರ್ಡ್, ಇಸ್ಮಾಯಿಲ್, ಕಿಶೋರ್ ಹಾಗೂ ಹಾಗೂ ಗುತ್ತಿಗೆದಾರ ಪ್ರಕಾಶ್ ಇದ್ದರು.

ಉಳ್ಳಾಲ ನಗರಸಭೆ ಸದಸ್ಯ ದಿನೇಶ್ ರೈ ಉಳ್ಳಾಲಗುತ್ತು ಸ್ವಾಗತಿಸಿದರು. ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.