ADVERTISEMENT

‘ಎಂ.ಬಿ.ಪಾಟೀಲಗೆ ಬುದ್ದಿ ಭ್ರಮಣೆಯಾಗಿದೆ’

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2017, 6:28 IST
Last Updated 7 ನವೆಂಬರ್ 2017, 6:28 IST
ಶಾಮನೂರು ಶಿವಶಂಕರಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ
ಶಾಮನೂರು ಶಿವಶಂಕರಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ   

ದಾವಣಗೆರೆ: ‘ಕೂಡಲಸಂಗಮದ ಬಸವ ಜಯಮೃತ್ಯುಂಜಯ ಶ್ರೀಗಳ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ ಸಚಿವ ಎಂ.ಬಿ.ಪಾಟೀಲರಿಗೆ ಬುದ್ಧಿಭ್ರಮಣೆಯಾಗಿದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದರು.

ಸೋಮವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕೂಡಲಸಂಗಮ ಶ್ರೀಗಳು ವೀರಶೈವರ ವಿರುದ್ಧ ಅವಾಚ್ಯ ಶಬ್ದ ಬಳಸುವುದಕ್ಕೂ ಮುನ್ನ ತಲೆ ಸರಿಯಿಟ್ಟುಕೊಂಡು ಮಾತನಾಡಿದ್ದರೆ ಗೊಂದಲಗಳು ಭುಗಿಲೇಳುತ್ತಿರಲಿಲ್ಲ’ ಎಂದರು.

‘ಬಸವ ಜಯಮೃತ್ಯುಂಜಯ ಶ್ರೀಗಳ ಬಗ್ಗೆಯೂ ಸಾಕಷ್ಟು ಆರೋಪಗಳಿವೆ. ಅವುಗಳನ್ನು ಈ ಸಮಯದಲ್ಲಿ ಪ್ರಸ್ತಾಪ ಮಾಡುವುದಿಲ್ಲ. ಲಿಂಗಾಯತರಿಂದ ಬಿರುದು ಪಡೆದುಕೊಳ್ಳಲು ಸ್ವಾಮೀಜಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಹರಿಹಾಯ್ದರು. ನ. 8ರಂದು ಬೆಂಗಳೂರಿನಲ್ಲಿ ಸಮಾಜದ ಮುಖಂಡರ ಸಭೆ ನಡೆಸಿ, ಮುಂದಿನ ನಿರ್ಧಾರವನ್ನು ಕೈಗೊಳ್ಳುವುದಾಗಿ ಶಾಮನೂರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.