ದಾವಣಗೆರೆ: ಈ ತಿಂಗಳ ಆರಂಭದಿಂದ ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಗುರುವಾರ ಬೆಳಿಗ್ಗೆ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯ ಮಾನಮಟ್ಟಿ ಅರಣ್ಯದಲ್ಲಿ ಸೆರೆ ಹಿಡಿಯಲಾಗಿದೆ.
ಪಳಗಿದ ಆನೆಗಳ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಸೆರೆಗೆ ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರು.
ಈ ತಿಂಗಳಲ್ಲಿ ಆನೆ ದಾಳಿಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ವ್ಯಾಪ್ತಿಯಲ್ಲಿ ಮೂವರು ಬಲಿಯಾಗಿದ್ದರು.
ಹಿರೇಕುರುಬರಹಳ್ಳಿಯ ರಸ್ತೆಯಲ್ಲಿ ಕಳೆದವಾರ ಕಾಣಿಸಿಕೊಂಡಿದ್ದ ಕಾಡಾನೆ ಸಾಗಿದ ಪರಿ.
* ಇದನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.