ADVERTISEMENT

ನವಲಗುಂದ: ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 22 ಮೇ 2017, 6:20 IST
Last Updated 22 ಮೇ 2017, 6:20 IST
ನವಲಗುಂದ: ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಕೊಲೆ
ನವಲಗುಂದ: ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಕೊಲೆ   

ನವಲಗುಂದ: ಮನೆಯಲ್ಲಿ ಮಲಗಿದ ವ್ಯಕ್ತಿಯನ್ನು ಮಾರಾಕಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕು ಕಡದಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಬಸಪ್ಪ ಭೀಮಪ್ಪ ಕರೀಕಟ್ಟಿ (40) ಕೊಲೆಯಾದ ವ್ಯಕ್ತಿ. ಅಪರಿಚಿತರಿಂದ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ಕೊಲೆ ಮಾಡಲು ಬಂದವರಿಗೆ ಅಡ್ಡ ಬಂದ ಮೃತನ ಹೆಂಡತಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ ಯಾಗಿದ್ದಾರೆ.

ADVERTISEMENT

ರೇಣವ್ವ ಚಾಕು ಇರಿತಕ್ಕೊಳಗಾದ ಮಹಿಳೆ. ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನವಲಗುಂದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.