ADVERTISEMENT

ಸಚಿವ ಹೆಗಡೆ ಕೈ ಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜನವರಿ 2018, 11:06 IST
Last Updated 24 ಜನವರಿ 2018, 11:06 IST

ಧಾರವಾಡ: ದಲಿತರ ಕುರಿತು ಹಗುರವಾಗಿ ಮಾತನಾಡಿರುವ ಅನಂತಕುಮಾರ ಹೆಗಡೆ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡುವ ಮೂಲಕ ಹಾಗೂ ಬಳ್ಳಾರಿಯ ಕಾರ್ಯಕ್ರಮದಲ್ಲಿ ಬೀದಿ ನಾಯಿಗಳಿಗೆ ನಾವು ಹೆದರುವುದಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಹೆಗಡೆ ಭಾವಚಿತ್ರ ದಹಿಸುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನದ ಬಗ್ಗೆ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು. ಇಂತಹ ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ಮತ್ತು ಸಚಿವರಿಗೆ ಕುಮ್ಮಕ್ಕು ನೀಡುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಕಾಂಗ್ರೆಸ್ ಮುಖಂಡರಾದ ಮಹೇಶ ಹುಲೆಣ್ಣವರ, ದೀಪಕ ಚಿಂಚೂರೆ, ರಾಬರ್ಟ ದದ್ದಾಪುರಿ, ಪ್ರಕಾಶ ಘಾಟಗೆ, ಹನುಮಂತ ಹರಿಜನ, ಬುರಾನ ಗವಳಿ, ಆನಂದ ಮುಶೆಣ್ಣವರ, ಶಂಕರ ಹೊಸಮನಿ ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.