ಗದಗ: ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವಿಧವಾ, ಅಂಗವಿಕಲ, ಸಂಧ್ಯಾ ಸುರಕ್ಷಾ ಹಾಗೂ ಸರ್ಕಾರ ವಿವಿಧ ಯೋಜನೆ ಗಳ ಅಡಿಯಲ್ಲಿ ಮಾಸಾಶನ ಪಡೆಯು ತ್ತಿರುವ ಜಿಲ್ಲೆಯ ಫಲಾನುಭವಿಗಳು ಆಯಾ ಗ್ರಾಮ, ಪಟ್ಟಣದ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಮ್ಮ ಆಧಾರ್ ಸಂಖ್ಯೆ ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಸಿಕೊಳ್ಳಬೇಕು.
ಜತೆಗೆ ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿಯನ್ನು ನೀಡಬೇಕು. ಈ ಅವಧಿಯೊಳಗೆ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡದಿದ್ದರೆ, ಅಂತಹ ಫಲಾನುಭವಿಗಳ ಮಾಸಾ ಶನ ರದ್ದುಗೊಳಿಸುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.