ADVERTISEMENT

ಮಹದಾಯಿ: ಮುಖ್ಯಮಂತ್ರಿಗೆ ಗಡುವು

​ಪ್ರಜಾವಾಣಿ ವಾರ್ತೆ
Published 2 ಜನವರಿ 2018, 9:07 IST
Last Updated 2 ಜನವರಿ 2018, 9:07 IST

ನರಗುಂದ: ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಬಳಿಗೆ ಮತ್ತೊಮ್ಮೆ ನಿಯೋಗ ಕೊಂಡೊಯ್ಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಒತ್ತಾಯಿಸಿದ್ದಾರೆ.

‘ನಿಯೋಗ ಕೊಂಡೊಯ್ಯುವ ಬಗ್ಗೆ ಜನವರಿ 3ರೊಳಗೆ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಬೆಂಗಳೂರಿ ನಲ್ಲಿ ಮುಖ್ಯಮಂತ್ರಿ ನಿವಾಸದ ಎದುರು ಧರಣಿ ನಡೆಸಿ, ರೈತರ ಶಕ್ತಿ ಪ್ರದ ರ್ಶನ ಮಾಡಲಾಗುವುದು’ ಎಂದು ಎಚ್ಚರಿಸಿದರು. ಮಹದಾಯಿ ಧರಣಿಯ 902ನೇ ದಿನವಾದ ಸೋಮವಾರ ಮಾತನಾಡಿದರು.

‘ಮಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ನರಗುಂದದಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಸಭೆಯನ್ನು ಜ.3 ರಂದು ನಡೆಸಲಾಗುವುದು. ಎಷ್ಟೇ ಅಡೆತಡೆ ಎದುರಾದರೂ ಹೋರಾಟ ನಿರಂತರವಾಗಿ ಮುಂದುವರಿದಿದೆ. ಮುಂದೆಯೂ ಏನೇ ಸಂಕಷ್ಟ ಬಂದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ’ ಎಂದರು.

ADVERTISEMENT

‘ಮಹದಾಯಿ ಹೋರಾಟ ಸಾಕಷ್ಟು ಏಳು ಬೀಳುಗಳನ್ನುಕಂಡಿದೆ. ಏನೇ ಸಂಕಷ್ಟ ಬಂದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ’ಎಂದು ವೀರೇಶ ಸೊಬರದಮಠ ಹೇಳಿದರು. ‘ಮಹದಾಯಿ ಹೋರಾಟದಲ್ಲಿ ರೈತರು ಸೈನಿಕರಿದ್ದಂತೆ. ಸೈನಿಕರಿಗೆ ಸಾಕಷ್ಟು ಕಷ್ಟಗಳು ಎದುರಾಗುತ್ತವೆ. ಆದರೆ, ಅವುಗಳನ್ನು ಸಹಿಸಿಕೊಂಡು ಮುಂದೆ ಸಾಗುತ್ತಾರೆ. ಹಾಗೆಯೇ ನಮ್ಮ ಗುರಿ ಒಂದೇ, ಮಲಪ್ರಭಾಕ್ಕೆ ಮಹದಾಯಿ ನೀರು ಹರಿಯಬೇಕು. ಅಲ್ಲಿಯವರೆಗೆ ರೈತರು ಒಂದಾಗಿ ಹೋರಾಟ ನಡೆಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.