ADVERTISEMENT

ಕೆಸರಿನಲ್ಲಿ ಸಿಲುಕಿ ಕಾಡಾನೆ ಮರಿ ಸಾವು

​ಪ್ರಜಾವಾಣಿ ವಾರ್ತೆ
Published 15 ಜೂನ್ 2017, 10:29 IST
Last Updated 15 ಜೂನ್ 2017, 10:29 IST
ಸಿದ್ದಾಪುರ ಸಮೀಪದ ಅಭ್ಯತ್‌ಮಂಗಲ ಗ್ರಾಮದಲ್ಲಿ ಕಾಡಾನೆ ಮರಿಯೊಂದು ಸಾವನ್ನಪ್ಪಿರುವುದು.
ಸಿದ್ದಾಪುರ ಸಮೀಪದ ಅಭ್ಯತ್‌ಮಂಗಲ ಗ್ರಾಮದಲ್ಲಿ ಕಾಡಾನೆ ಮರಿಯೊಂದು ಸಾವನ್ನಪ್ಪಿರುವುದು.   

ಸಿದ್ದಾಪುರ: ಸಮೀಪದ ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ ಗ್ರಾಮದ ಕಾಫಿ ತೋಟವೊಂದರಲ್ಲಿ ಕೆಸರಿನಲ್ಲಿ ಸಿಕ್ಕು ಕಾಡಾನೆ ಮರಿಯೊಂದು ಮಂಗಳವಾರ ಸಾವನ್ನಪ್ಪಿದೆ.

ಕಾಫಿ ಬೆಳೆಗಾರರಾದ ಶ್ಯಾಂ ಪ್ರಸಾದ್ ಎಂಬುವವರ ತೋಟದಲ್ಲಿ ಅಂದಾಜು 6 ವರ್ಷ ಪ್ರಾಯದ ಆನೆ ಮರಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡು ಬಂದಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಸ್ಥಳಕ್ಕೆ ಡಿಎಫ್‌ಓ ಸೂರ್ಯಸೇನ್, ವಲಯ ಅರಣ್ಯ ಅಧಿಕಾರಿ ಬಾನಂಡ ದೇವಿಪ್ರಸಾದ್, ಉಪವಲಯ ಅರಣ್ಯಾಧಿಕಾರಿ ರಂಜನ್ ಭೇಟಿ ನೀಡಿ ಜೆಸಿಬಿ ಬಳಸಿ ಆನೆಯನ್ನು ಮೇಲೆತ್ತಿದರು.

ADVERTISEMENT

ಎರಡು ದಿನಗಳ ಹಿಂದೆ ಕೆಸರಿನಲ್ಲಿ ಹೂತು ಮೇಲೇಳಲಾಗದೇ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ವೈದ್ಯಾಧಿಕಾರಿ ಡಾ.ಉಮಾಶಂಕರ್ ಮರಣೋತ್ತರ ಪರೀಕ್ಷೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.