ADVERTISEMENT

ಗಂಡು ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2017, 7:02 IST
Last Updated 16 ಸೆಪ್ಟೆಂಬರ್ 2017, 7:02 IST

ಚನ್ನರಾಯಪಟ್ಟಣ: ದಂಡಿಗನಹಳ್ಳಿ ಹೋಬಳಿ ಬೋಜೇಗೌಡನ ಪಾಳ್ಯದ ತೋಟದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸುಮಾರು 3 ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ.
ಕಳೆದ ವಾರ ಗ್ರಾಮದ ಕುಮಾರ್ ಅವರಿಗೆ ಸೇರಿದ ತೋಟದಲ್ಲಿ ಬೋನು ಇರಿಸಲಾಗಿತ್ತು. ಶುಕ್ರವಾರ ಮುಂಜಾನೆ ಚಿರತೆ ಸೆರೆಸಿಕ್ಕಿದೆ.

ಆರೋಗ್ಯ ತಪಾಸಣೆ ನಡೆಸಿದ ಬಳಿಕ ಬಿಸಿಲೆ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ವಲಯ ಅರಣ್ಯಾಧಿಕಾರಿ ಎಚ್‌.ಆರ್‌. ಹೇಮಂತ್‌ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT