ADVERTISEMENT

ಚಳವಳಿ ಹಿಂಪಡೆದ ರೈತ ಸಂಘ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2016, 9:29 IST
Last Updated 26 ಸೆಪ್ಟೆಂಬರ್ 2016, 9:29 IST

ಚನ್ನರಾಯಪಟ್ಟಣ: ತಮಿಳುನಾಡಿನ ಧೋರಣೆ ಖಂಡಿಸಿ ಆರು ದಿನಗಳಿಂದ ಪಟ್ಟಣದ ಕೆ.ಆರ್‌.ವೃತ್ತದಲ್ಲಿ ರೈತ ಸಂಘದ ಸದಸ್ಯರು ನಡೆಸುತ್ತಿದ್ದ ಚಳವಳಿಯನ್ನು ಭಾನುವಾರ ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಯಿತು.

ಕರ್ನಾಟಕದ ರಾಜ್ಯದ ವಿಧಾನಮಂಡಲದ ಅಧಿವೇಶನದಲ್ಲಿ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂಬ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ಸೆ. 27ರಂದು ಸುಪ್ರೀಂಕೋರ್ಟ್‌ ಆದೇಶ ನೀಡಲಿದೆ. ಆ ನಂತರ ಚಳವಳಿ ಮುಂದುವರಿಸಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.

ರಾಜ್ಯ ರೈತ ಸಂಘದ ಕಾರ್ಯದರ್ಶಿ ಆನೆಕೆರೆ ರವಿ, ಪದಾಧಿಕಾರಿಗಳಾದ ಸಿ.ಜಿ.ರವಿ, ಎಂ.ಎಲ್‌.ಹರೀಶ್‌, ಮಂಜಣ್ಣ, ಚಿಕ್ಕೇಗೌಡ, ರಾಜೇಗೌಡ, ಮೋಹನ್‌ರಾಜ್‌ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.