ಬಾಣಾವರ: ‘ಧಾರ್ಮಿಕ ಭಾವನೆಯಿಂದ ಸಂಸ್ಕಾರ ಬೆಳೆದು, ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.
ಪಟ್ಟಣದ ಕೆರೆಕೋಡಿ ಮಠ ಆವರಣದಲ್ಲಿ ಹನ್ನೊಂದು ಸಹಸ್ರ ಜ್ಯೋತಿ ಬೆಳಗಿಸುವ ಕಾರ್ತಿಕ ದೀಪೋತ್ಸವ ಹಾಗೂ ಧಾರ್ಮಿಕ ಜನಜಾಗೃತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಭಾರತ ಅಧ್ಯಾತ್ಮದ ತವರು. ಈ ನೆಲದಲ್ಲಿ ಸಂಪ್ರದಾಯ ಆಚರಣೆ ಅನಾದಿ ಕಾಲದಿಂದ ನಡೆಯುತ್ತಿದೆ. ಮನುಷ್ಯನ ಜೀವನದಲ್ಲಿ ಬೆಳಕಿದ್ದರೆ ಭಯವಿರುವುದಿಲ್ಲ ಆತ್ಮದಲ್ಲಿ ಅರಿವಿನ ಜ್ಯೋತಿ ಪ್ರಜ್ವಲಿಸಬೇಕು ಎಂದರು. ಕೋಳಗುಂದ ಕೇದಿಗೆ ಮಠದ ಜಯಚಂದ್ರಶೇಖರ ಸ್ವಾಮೀಜಿ ಅವರು, ‘ಅಂತರಂಗ ಶುದ್ಧಿಯಿಂದ ಬದುಕಿನಲ್ಲಿ ಶಾಶ್ವತ ಸುಖ ಅನುಭವಿಸಲು ಸಾಧ್ಯ’ ಎಂದು ಹೇಳಿದರು.
ಬಿದರೆಯ ದೊಡ್ಡಮಠದ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ, ಮಾರಗೊಂಡನಹಳ್ಳಿಯ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಸ್.ಅಶೋಕ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮಿ ಶ್ರೀಧರ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಸಿ.ಶ್ರೀನಿವಾಸ್, ವೆಂಕಟೇಶ್ ಲಾಡ್, ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ಆರ್.ಶ್ರೀಧರ್, ಕರವೇ ಲಕ್ಷ್ಮೀಶ್, ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ಸೇತುರಾಮ್, ಉದ್ಯಮಿ ಜಗದೀಶ್, ಶಿಕ್ಷಕರಾದ ನಾಗರಾಜು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.