ಹಾಸನ: ಬಿಜೆಪಿ ಪರಿವರ್ತನಾ ಯಾತ್ರೆ ಅಂಗವಾಗಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಸೀರೆ ವಿತರಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾರ್ಯಕ್ರಮ ಮುಗಿದ ಬಳಿಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರೀತಮ್ ಗೌಡ ಹೆಸರಿನ ಸೀಲ್ ಹಾಕಿರುವ ಸೀರೆ ಕವರ್ಗಳನ್ನು ಮಹಿಳೆಯರಿಗೆ ವಿತರಿಸಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅದೇ ರೀತಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಅಗಿಲೆ ಯೋಗಿಶ್ ನಡೆಸುತ್ತಿರುವ ಸಹರ ಸಂಸ್ಥೆ ಸೀಲ್ ಇರುವ ಕೂಪನ್ ವಿತರಣೆ ಮಾಡಲಾಗಿದೆ. ಕೂಪನ್ ತೋರಿಸಿದವರಿಗೆ ಇಂತಿಷ್ಟು ಹಣ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
‘ಸಮಾರಂಭದಲ್ಲಿ ಸೀರೆ ಕೂಪನ್ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಕೂಪನ್ ನೀಡಿದ್ದರೆ ಅದು ತಪ್ಪು. ಬಂದವರಿಗೆ ಮಧ್ಯಾಹ್ನ ಊಟ ವ್ಯವಸ್ಥೆ ಮಾಡಲಾಗಿತ್ತು’ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರೀತಮ್ ಗೌಡ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.