ADVERTISEMENT

ಸರ್ಕಾರದ ಸಾಧನೆಯೇ ಪಕ್ಷಕ್ಕೆ ಶ್ರೀರಕ್ಷೆ: ಪುಟ್ಟೇಗೌಡ

ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಕಾಂಗ್ರೆಸ್‌ ಪ್ರಚಾರ

​ಪ್ರಜಾವಾಣಿ ವಾರ್ತೆ
Published 8 ಮೇ 2018, 12:57 IST
Last Updated 8 ಮೇ 2018, 12:57 IST

ಚನ್ನರಾಯಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಾಧನೆ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಸ್‌.ಪುಟ್ಟೇಗೌಡ ಹೇಳಿದರು.

ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿ ಹಲವು ಜನಪರ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರೂಪಿಸಿದೆ. ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಸಾಲ ಮನ್ನಾ ಮಾಡಲಾಗುವುದು ಎಂದು ಈಗ ಭರವಸೆ ನೀಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಈಗಾಗಲೇ ಸಾಲ ಮನ್ನಾ ಮಾಡಿದ್ದಾರೆ ಎಂದರು.

ADVERTISEMENT

ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಪಕ್ಷದಲ್ಲಿನ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

‘ಕಬ್ಬಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಸಾಲ ನೀಡಲಾಗಿದೆಯೇ ಎಂಬುದನ್ನು ಶಾಸಕರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ’ ಎಂದು ಮೂದಲಿಸಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಮುಖಂಡ ಎಂ.ಎ.ರಂಗಸ್ವಾಮಿ, ಮುಖಂಡರಾದ ಸಿ.ವಿ.ರಾಜಪ್ಪ, ಎಚ್.ಎಸ್‌.ವಿಜಯಕುಮಾರ್‌, ಜೆ.ಎಂ.ರಾಮಚಂದ್ರ, ಎಚ್‌.ಎಸ್‌.ಶ್ರೀಕಂಠಯ್ಯ, ಎಂ.ಕೆ. ಮಂಜೇಗೌಡ, ಮಂಜುನಾಥ್‌, ಎಂ. ಶಂಕರ್‌, ಬಷೀರ್‌, ಎಚ್‌.ಎಂ.ಜಯರಾಂ ಮಾತನಾಡಿದರು. ಮುಖಂಡರಾದ ದೇವಮ್ಮ, ಎಚ್‌.ಎಂ.ಪ್ರಮೀಳಾ, ಪುಟ್ಟಸ್ವಾಮಿ, ಎಚ್‌.ಜೆ.ಕಿರಣ್‌ ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.