ಸವಣೂರ: ‘ಬಿಜೆಪಿ ಪಕ್ಷ ಹೇಳಿದ್ದನ್ನೇ ಮಾಡಿದೆ. ಒಂದರ್ಥದಲ್ಲಿ ಹೇಳದ್ದಕ್ಕಿಂತ ಹೆಚ್ಚು ಕೆಲಸ ಮಾಡಿ ತೋರಿಸಿದೆ’ ಎಂದು ಸಂಸದ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು.
ಪಟ್ಟಣದ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಉಚಿತ ಎಲ್ಪಿಜಿ ಸಿಲಿಂಡರ್ ವಿತರಿಸಿ ಮಾತನಾಡಿದರು.
‘ಉಜ್ವಲ ಯೋಜನೆಯು ಬಡ ಹೆಣ್ಣು ಮಕ್ಕಳ ಪರವಾಗಿ ರೂಪಿಸಿದ ಅತ್ಯಂತ ಮಹತ್ವದ ಯೋಜನೆ. ಈ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಇದುವರೆಗೂ 75 ಸಾವಿರ ಜನರು ಅರ್ಜಿ ಸಲ್ಲಿಸಿದ್ದಾರೆ. ಸವಣೂರ–ಶಿಗ್ಗಾವಿ ತಾಲ್ಲೂಕಿನಲ್ಲಿ ಸುಮಾರು 12 ಸಾವಿರ ಅರ್ಜಿಗಳು ಬಂದಿವೆ. ಅದರಲ್ಲಿ ಸುಮಾರು ನಾಲ್ಕು ಸಾವಿರ ಜನರಿಗೆ ನೀಡಲಾಗಿದೆ. ಇನ್ನುಳಿದ ಜನರಿಗೆ ಹಂತ–ಹಂತವಾಗಿ ವಿತರಿಸಲಾಗುವುದು’ ಎಂದು ವಿವರಿಸಿದರು.
ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಮಾತನಾಡಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಮಹೇಶ ಸಾಲಿಮಠ, ಪುರಸಭೆ ಅಧ್ಯಕ್ಷ ಖಲಂದರಅಹ್ಮದ ಅಕ್ಕೂರ, ಉಪಾಧ್ಯಕ್ಷೆ ರಾಜೇಶ್ವರಿ ಬುಶೆಟ್ಟಿ, ಸದಸ್ಯ ಸಂಗಮೇಶ ಯರೆಶೀಮಿ, ನಿಂಗಪ್ಪ ಮರಗಪ್ಪನವರ, ಯುವ ಮೋರ್ಚಾ ಅಧ್ಯಕ್ಷ ಹನುಮಂತಗೌಡ ಮುದಿಗೌಡ್ರ, ಮುಖಂಡ ಸುರೇಶ ಹಿರೇಣ್ಣನವರ, ಶಂಕರ ಪಾಟೀಲ, ಧರೇಪ್ಪಗೌಡ್ರ ಪಾಟೀಲ, ಗಂಗಾಧರ ಬಾಣದ, ಫಕೀರಪ್ಪ ವಾಲ್ಮೀಕಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.