ADVERTISEMENT

ಗುಡ್ಡದಮಾದಾಪುರ ಏತ ನೀರಾವರಿ ಯೋಜನೆಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2017, 8:07 IST
Last Updated 24 ನವೆಂಬರ್ 2017, 8:07 IST

ಹಿರೇಕೆರೂರ: ತಾಲ್ಲೂಕಿನ ಗುಡ್ಡದಮಾದಾಪುರ ಏತ ನೀರಾವರಿ ಯೋಜನೆಗೆ ಕರ್ನಾಟಕ ನೀರಾವರಿ ನಿಗಮದಿಂದ ಒಪ್ಪಿಗೆ ದೊರೆತಿದೆ ಎಂದು ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಸಿ.ಪಾಟೀಲ ತಿಳಿಸಿದರು.

ಕರ್ನಾಟಕ ನೀರಾವರಿ ನಿಗಮದ ಬೋರ್ಡ್‌ನಲ್ಲಿ ₹24 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೆ ಅನುಮೋದನೆ ದೊರೆತಿದೆ. ಇದರಿಂದಾಗಿ, ತುಂಗಭದ್ರಾ ನದಿಯಿಂದ ಗುಡ್ಡದಮಾದಾಪುರ, ಕಮಲಾಪುರ, ಹಿರೇಕಬ್ಬಾರ, ಅಣಜಿ, ನಾಗವಂದ, ಹೊಸಕಟ್ಟಿ, ಗಂಗಾಯಿಕೊಪ್ಪ ಹಾಗೂ ಶಿಕಾರಿಪುರ ತಾಲ್ಲೂಕಿನ ಗುಡದಳ್ಳಿ ಗ್ರಾಮಗಳ ಕೆರೆಗಳಿಗೆ ನೀರು ಹರಿಯಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT