ADVERTISEMENT

ಬಸ್‌– ಬೈಕ್‌ ಡಿಕ್ಕಿ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2017, 7:04 IST
Last Updated 14 ಆಗಸ್ಟ್ 2017, 7:04 IST

ಹಿರೀಸಾವೆ: ಹಿರೀಸಾವೆ ಹೋಬಳಿಯ ಬೂಕನಬೆಟ್ಟದ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್‌ ಮತ್ತು ಕೆ.ಎಸ್.ಆರ್‌.ಟಿ.ಸಿ. ಬಸ್‌ ಭಾನುವಾರ ಅಪಘಾತಕ್ಕೀಡಾಗಿ ಇಬ್ಬರು ಬೈಕ್‌ ಸವಾರರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕು, ಸಾಲಿಗ್ರಾಮ ಹೋಬಳಿಯ ಕಾಟನಾಳು ಗ್ರಾಮದ ಶಿವಣ್ಣ (45) ಮತ್ತು ಶಿವರಾಮ (35) ಮೃತಪಟ್ಟವರು.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚನ್ನರಾಯಪಟ್ಟಣ ಕಡೆಯಿಂದ ಬೈಕ್‌ ನಲ್ಲಿ ಬಂದು, ಬೂಕನಬೆಟ್ಟದ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ, ಹಿಂದಿನಿಂದ ಬಂದ ಬಸ್‌ ಡಿಕ್ಕಿ ಹೊಡೆದಿದೆ. ಶಿವರಾಮು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿವಣ್ಣ ಅವರನ್ನು ಚನ್ನರಾಯಪಟ್ಟ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಅಪಘಾತದಿಂದಾಗಿ ಹಾಸನ–ಬೆಂಗಳೂರು ನಡುವಿನ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಿರೀಸಾವೆ ಪಿ.ಎಸ್.ಐ ಜಗದೀಶ್, ಸಿಬ್ಬಂದಿ ಹಾಗೂ ರಾಷ್ಟ್ರೀಯ ಹೆದ್ದಾರಿಯ ತುರ್ತು ಸೇವೆಗಳ ಸಿಬ್ಬಂದಿ ರಸ್ತೆ ಸಂಚಾರ ಸುಗಮಗೊಳಿಸಿದರು.

ADVERTISEMENT

ಹಿರೀಸಾವೆ ಹೋಬಳಿಯ ಬೂಕನಬೆಟ್ಟದಲ್ಲಿ ಜೀರ್ಣೋದ್ಧಾರ ಮಾಡಿರುವ ರಂಗನಾಥಸ್ವಾಮಿಯ ದೇವಾಲಯದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆಯುತ್ತಿದ್ದ ಹೋಮ ಮತ್ತು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಟನಾಳು ಗ್ರಾಮದಿಂದ ಬೈಕ್‌ನಲ್ಲಿ ಬರುತ್ತಿದ್ದರು. ದೇವಸ್ಥಾನದ ಅಣತಿ ದೂರದಲ್ಲಿ ಅಪಘಾತ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.