ADVERTISEMENT

ಕಮಲಾವತಿ ನದಿ ಸ್ವಚ್ಛತೆಗಾಗಿ 15ಕ್ಕೆ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2017, 8:49 IST
Last Updated 13 ನವೆಂಬರ್ 2017, 8:49 IST

ಸೇಡಂ: ‘ಕಮಲಾವತಿ ನದಿಯನ್ನು ಸ್ವಚ್ಛಗೊಳಿಸುವಂತೆ ಆಗ್ರಹಿಸಿ ನ. 15ರಂದು ಪಟ್ಟಣದ ಬೆಳಿಗ್ಗೆ 9 ಗಂಟೆಗೆ ಪಂಚಲಿಂಗೇಶ್ವರ ದೇವಸ್ಥಾನದಿಂದ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಕೇರಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ಭಾನುವಾರ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಸೇಡಂ ಪಟ್ಟಣದ ಜೀವನದಿಯಾದ ಕಮಲಾವತಿ ನದಿಯ ನೀರು ಕಲುಷಿತಗೊಂಡಿದ್ದು, ಜೀವನೋಪಾಯಕ್ಕೆ ಬರುತ್ತಿಲ್ಲ. ಇದರಿಂದ ಸೇಡಂ ಜನತೆಗೆ ತೊಂದರೆಯಾಗುತ್ತಿದ್ದು, ವಿವಿಧ ರೀತಿಯ ರೋಗಗಳು ಹರಡುತ್ತಿವೆ.

ನದಿಯನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಬಾರಿ ಮನವಿ ಮಾಡಲಾಗಿದೆ. ಆದರೆ, ಇಲ್ಲಿಯವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ’ ಎಂದು ವಿಷಾದಿಸಿದರು. ಪಾದಯಾತ್ರೆ ಮೂಲಕ ಜನರಲ್ಲಿ ನದಿಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.