ADVERTISEMENT

ನಾಲ್ವರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ದತ್ತಾತ್ರೇಯ ದೇವರ ದರ್ಶನಕ್ಕೆ ಬಂದಿದ್ದ ಭಕ್ತರು

​ಪ್ರಜಾವಾಣಿ ವಾರ್ತೆ
Published 20 ಮೇ 2018, 7:14 IST
Last Updated 20 ಮೇ 2018, 7:14 IST
ಊಟ ಮಾಡಿದ ಬಳಿಕ ಅಸ್ವಸ್ಥಗೊಂಡಿದ್ದ ಮಹಿಳೆಯರನ್ನು ಶನಿವಾರ ಚಿಕಿತ್ಸೆಗಾಗಿ ಕಲಬುರ್ಗಿಯ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿತ್ತು
ಊಟ ಮಾಡಿದ ಬಳಿಕ ಅಸ್ವಸ್ಥಗೊಂಡಿದ್ದ ಮಹಿಳೆಯರನ್ನು ಶನಿವಾರ ಚಿಕಿತ್ಸೆಗಾಗಿ ಕಲಬುರ್ಗಿಯ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿತ್ತು   

ಕಲಬುರ್ಗಿ: ಅಫಜಲಪುರ ತಾಲ್ಲೂಕು ದೇವಲ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಬಂದಿದ್ದ ನಾಲ್ವರು ಭಕ್ತರು ಶನಿವಾರ ಅಸ್ವಸ್ಥಗೊಂಡಿದ್ದು, ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

ಮಹಾರಾಷ್ಟ್ರದ ಗುಲಾಬ್ ಪಾಗಿರೆ, ಕೇಸರಬಾಯಿ ಪಾಗಿರೆ, ಸುಧಾಕರ ಮಾಗುಲಕರ್ ಹಾಗೂ ಶಾರದಾ ಅಸ್ವಸ್ಥಗೊಂಡವರು.

‘ದೇವರ ದರ್ಶನ ಬಳಿಕ ಎಲ್ಲರೂ ಹೋಟೆಲ್‌ನಲ್ಲಿ ಊಟ ಮಾಡಿದ್ದಾರೆ. ಇದಾದ ಬಳಿಕ ಗಾಣಗಾಪುರ ಸಮೀಪದ ಸಂಗಮ ವೀಕ್ಷಣೆಗೆ ತೆರಳಿದ್ದಾರೆ. ಈ ವೇಳೆ ಮಾರ್ಗಮಧ್ಯೆಯೇ ಏಕಾಏಕಿ ಅಸ್ವಸ್ಥಗೊಂಡಿದ್ದು, ಇದನ್ನು ಗಮನಿಸಿದ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.