ಅಫಜಲಪುರ (ಕಲಬುರ್ಗಿ ಜಿಲ್ಲೆ): ‘ಹೈದರಾಬಾದ್ ಕರ್ನಾಟಕದಲ್ಲಿ ರಾಜಕೀಯವಾಗಿ ಖರ್ಗೆ ಅವರನ್ನು ಮುಗಿಸುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ರಾಜಕೀಯವಾಗಿ ಮುಗಿಸುತ್ತಾರೋ ಅಥವಾ ನನ್ನನ್ನೇ ಮುಗಿಸಲು ಯಾರಿಗಾದರೂ ಸುಪಾರಿ ಕೊಟ್ಟಿದ್ದಾರೋ ಗೊತ್ತಿಲ್ಲ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ‘ಸುಪಾರಿಗೆ ನಾನು ಹೆದರುವುದಿಲ್ಲ. ಮತದಾರರ ಆಶೀರ್ವಾದ ಇರುವವರೆಗೆ ರಾಜಕೀಯವಾಗಿ ನನ್ನನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. 11 ಬಾರಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದೇನೆ. ಯಾವತ್ತೂ ಪಕ್ಷ ಬದಲಾವಣೆ ಮಾಡಿಲ್ಲ. ಜನಶಕ್ತಿ ಮುಂದೆ ಹಣಶಕ್ತಿ ನಡೆಯುವುದಿಲ್ಲ. ನಾನು ದುಡ್ಡಿಗಾಗಿ ರಾಜಕಾರಣ ಮಾಡುವುದಿಲ್ಲ. ಅಭಿವೃದ್ಧಿಗಾಗಿ ರಾಜಕಾರಣ ಮಾಡುತ್ತೇನೆ. ಹೀಗಾಗಿ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ’ ಎಂದು ಗುಡುಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.