ಅಫಜಲಪುರ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಶನಿವಾರದಿಂದ ಭೀಮಾನದಿಗೆ ಮತ್ತೆ 35 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದ್ದು, ಅದೇ ನೀರನ್ನು ಅಫಜಲಪುರದ ಸೊನ್ನ ಭೀಮಾ ಜಲಾಶಯದಿಂದ 5ಗೇಟ್ಗಳ ಮುಖಾಂತರ ಭೀಮಾನದಿಗೆ ನೀರು ಬಿಡಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ಅಫಜಲಪುರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕುಮಾರ ಸಾಲೀಮಠ ತಿಳಿಸಿದರು.
ಈ ಕುರಿತು ಭಾನುವಾರ ಮಾಹಿತಿ ನೀಡಿದ ಅವರು, ಭೀಮಾ ಬ್ಯಾರೇಜ್ನಲ್ಲಿ ಸದ್ಯಕ್ಕೆ 405.8 ಮೀ. ನೀರು ಸಂಗ್ರಹಿಸಲಾಗಿದೆ. ಹೆಚ್ಚಿನ ನೀರನ್ನು ಭೀಮಾ ಜಲಾಶಯ ಮುಖಾಂತರ ನದಿಗೆ ಬಿಡಲಾಗುತ್ತಿದೆ. ಇನ್ನೊಂದು ಕಡೆ ವಿದ್ಯುತ್ ಉತ್ಪಾದನೆ ಘಟಕದಿಂದಲೂ ನೀರು ಭೀಮಾನದಿಗೆ ಬಿಡಲಾಗುತ್ತಿದೆ. ಅದಕ್ಕಾಗಿ ರೈತರು ಭೀಮಾನದಿ ದಡಕ್ಕೆ ಹೋಗಕೂಡದು ಮತ್ತು ಜಾನುವಾರುಗಳನ್ನು ಬಿಡಕೂಡದು. ನೀರಿನ ಹರಿಯುವಿಕೆ ಇನ್ನೂ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಬಾಗಿನ ಅರ್ಪಣೆ: ಭೀಮಾ ಜಲಾಶಯ ತುಂಬಿದ್ದರಿಂದ ಸೋಮವಾರ 11 ಗಂಟೆಗೆ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಅವರು ತಾಲ್ಲೂಕಿನ ಸೊನ್ನ ಗ್ರಾಮದ ಹತ್ತಿರ ಭೀಮಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ ಎಂದು ಕಾರ್ಯಪಾಲಕ ಎಂಜಿನಿಯರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.