ADVERTISEMENT

ತೇರು ಎಳೆಯುವ ವಿಷಯಕ್ಕೆ ಗಲಾಟೆ: 15ಕ್ಕೂ ಹೆಚ್ಚು ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 13:20 IST
Last Updated 9 ಫೆಬ್ರುವರಿ 2018, 13:20 IST

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕು ಕೊಂಡಗುಳಿ ಗ್ರಾಮದಲ್ಲಿ ಶುಕ್ರವಾರ ದಲಿತರು ಮತ್ತು ಜಾತ್ರಾ ಸಮಿತಿ ಸದಸ್ಯರ ಮಧ್ಯೆ ತೇರು ಎಳೆಯುವ ವಿಷಯಕ್ಕೆ ಸಂಬಂಧಿಸಿದಂತೆ ಮಾರಾಮಾರಿ ನಡೆದಿದೆ.

ಮರೆಮ್ಮ ದೇವಿ ಜಾತ್ರೆಯಲ್ಲಿ ತೇರು ಎಳೆಯುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಪರಸ್ಪರ ಹೊಡೆದಾಡಿಕೊಂಡ ಪರಿಣಾಮ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಅವರ ವಾಹನದ ಮೇಲೂ ಕಲ್ಲು ತೂರಲಾಗಿದ್ದು, ಪೊಲೀಸ್ ವಾಹನ ಜಖಂಗೊಂಡಿದೆ.

ADVERTISEMENT

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.