ADVERTISEMENT

ಸುನಾರ ತಾಂಡಾ: ನರೇಗಾ ಕೆಲಸ ಆರಂಭ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 4:30 IST
Last Updated 26 ಏಪ್ರಿಲ್ 2024, 4:30 IST
ಕಮಲಾಪುರ ತಾಲ್ಲೂಕಿನ ಕಿಣ್ಣಿ ಸರಫೋಸ್‌ ಸುನಾರ ತಾಂಡಾದಲ್ಲಿ ಗುರುವಾರ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರು ನಾಲೆ ಹೂಳೆತ್ತಿದ್ದರು
ಕಮಲಾಪುರ ತಾಲ್ಲೂಕಿನ ಕಿಣ್ಣಿ ಸರಫೋಸ್‌ ಸುನಾರ ತಾಂಡಾದಲ್ಲಿ ಗುರುವಾರ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರು ನಾಲೆ ಹೂಳೆತ್ತಿದ್ದರು   

ಕಮಲಾಪುರ: ತಾಲ್ಲೂಕಿನ ಸೊಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಣ್ಣಿ ಸರಫೋಸ ಬಳಿಯ ಸೋನಾರ ತಾಂಡಾದಲ್ಲಿನ ಕಾರ್ಮಿಕರಿಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದ್ದು ಗುರುವಾರದಿಂದ ಆರಂಭಗೊಂಡಿದೆ.

ಈ ಕುರಿತು ಕಳೆದ ಏ.22 ರಂದು ‘ಸೋನಾರ ತಾಂಡಾದಲ್ಲಿ ಸ್ಮಶಾನ ಮೌನ’ ಶೀರ್ಷಿಕೆಯಡಿ ಪ್ರಜಾವಾಣಿ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು.

ಅದೇ ದಿನ ತಾಲ್ಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶ ಜಗನ್ನಾಥ ರೆಡ್ಡಿ, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳನ್ನು ಒಳಗೊಂಡ ತಂಡ ತಾಂಡಾಕ್ಕೆ ದೌಡಾಯಿಸಿ ಮಾಹಿತಿ ಮಾಹಿತಿ ಪಡೆದಿತ್ತು. ಏ.23 ರಂದು ಎನ್‌ಎಂಆರ್‌ ತೆಗೆದು ಏ.24ರಿಂದ ಕೆಲಸ ಒದಗಿಸಲಾಗುವುದು ಎಂದು ತಿಳಿಸಿದ್ದರು.

ADVERTISEMENT

‘ಒಟ್ಟು 33 ಜನರ ಜಾಬ್‌ಕಾರ್ಡ್‌ ಇದ್ದು 24 ಜನ ಉದ್ಯೋಗ ಖಾತ್ರಿ ಕಾಮಗಾರಿ ಕೈಗೊಳ್ಳಲು ಅರ್ಹರಿದ್ದಾರೆ. ಗುರುವಾರ 16 ಜನ ಕೆಲಸಕ್ಕೆ ಹಾಜರಾಗಿದ್ದಾರೆ. ಉಳಿದ 10 ಜನರ ಬ್ಯಾಂಕ್‌ ಖಾತೆ ಮತ್ತಿತರ ಸಮಸ್ಯೆಗಳಿದ್ದು ಸರಿಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಅವರಿಗೂ ಕೆಲಸ ಒದಗಿಸಲಾಗುವುದು’ ಎಂದು ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಜಗನ್ನಾಥ ರೆಡ್ಡಿ, ಪಿಡಿಒ ಶರಣಬಸಪ್ಪ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.