ADVERTISEMENT

‘ಕಾಂಗ್ರೆಸ್ ಜನಪರ ಯೋಜನೆಗಳು ಜನರ ಮನದಲ್ಲಿವೆ’

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2017, 8:53 IST
Last Updated 8 ನವೆಂಬರ್ 2017, 8:53 IST

ಗೋಣಿಕೊಪ್ಪಲು: ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನತೆಯ ಮನದಲ್ಲಿ ಉಳಿದಿದೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಮಾಂಗೇರ ಪದ್ಮಿನಿ ಪೊನ್ನಪ್ಪ ಹೇಳಿದರು. ಗೋಣಿಕೊಪ್ಪಲು ಪಟ್ಟಣದಲ್ಲಿ ಸೋಮವಾರ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಮತ್ತೆ ಜನತೆ ಬಯಸುತ್ತಿದ್ದಾರೆ ಎಂದರು. ನಗರ ಕಾಂಗ್ರೆಸ್ ಅಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕಾಡ್ಯಮಾಡ ಚೇತನ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಮೋದ್ ಗಣಪತಿ, ಬಿ.ಎನ್.ಪ್ರಕಾಶ್, ರಾಜಶೇಖರ್, ಯಾಸ್ಮಿನ್, ಶಾಹೀದ, ಧನಲಕ್ಷ್ಮಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್ ಸಮ್ಮದ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಆಶಾ ಜೇಮ್ಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT