ಕುಶಾಲನಗರ: ಕೊಡಗು- ಮೈಸೂರು ಜಿಲ್ಲೆಗಳ ಗಡಿಭಾಗದ ಟೋಲ್ ಗೇಟ್ ಚೆಕ್ ಪೋಸ್ಟ್ ಬಳಿ ಶುಕ್ರವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹4 ಲಕ್ಷವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡರು.
ಕೊಪ್ಪದಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ವಾಹನದಲ್ಲಿ ದಾಖಲೆ ರಹಿತ ನಗದು ಪತ್ತೆಯಾಯಿತು. ದಾವಾ ನುಬು ಎಂಬುವರ ಬಳಿಯಿದ್ದ ಹಣವನ್ನು ಚುನಾವಣಾಧಿಕಾರಿ ಪೂವಯ್ಯ ನೇತೃತ್ವದಲ್ಲಿ ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ತಪಾಸಣಾ ಕೇಂದ್ರದ ಪೊಲೀಸ್ ಸಿಬ್ಬಂದಿ ಉಮಾ, ಅರುಣ್, ಶಶಿಕುಮಾರ್, ಜಯಪ್ರಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.