ಮಡಿಕೇರಿ: ಕೊಡಗು ಜಿಲ್ಲೆಗೆ ಬಂದಿರುವ ನೆರವು ಕುರಿತು ಶ್ವೇತಪತ್ರ ಹೊರಡಿಸುವುದೂಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ, ನಗರದ ಗಾಂಧಿ ಮೈದಾನದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸದಸ್ಯರು 24 ಗಂಟೆಗಳ ಕಾಲ ನಡೆಸಿದ ಸತ್ಯಾಗ್ರಹವನ್ನು ಗುರುವಾರ ಬೆಳಿಗ್ಗೆಅಂತ್ಯಗೊಳಿಸಿದರು.
ಪ್ರತಿಭಟನಾ ಸ್ಥಳಕ್ಕೆ ಬಂದ ವಿಶೇಷ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ದಾನಿಗಳಿಂದ ಹರಿದುಬಂದ ಆರ್ಥಿಕ ನೆರವು, ಆಹಾರ ಪದಾರ್ಥ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂದಿರುವ ಹಣದ ಮಾಹಿತಿ ಬಹಿರಂಗ ಪಡಿಸಬೇಕು. ಜಿಲ್ಲೆಯ ಮರು ನಿರ್ಮಾಣಕ್ಕೆ ಬಂದ ನೆರವನ್ನು ಬೇರೆ ಪ್ರದೇಶ, ಬೇರೆ ಉದ್ದೇಶಕ್ಕೆ ಬಳಸಬಾರದು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬಳಸುತ್ತೇವೆಂದುಸರ್ಕಾರ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.
ಜಲ ಸ್ಫೋಟ, ಭೂಸ್ಫೋಟದಿಂದಬೀದಿಪಾಲಾದಸಂತ್ರಸ್ತರ ಬದುಕು ಇಂದಿಗೂ ಅತಂತ್ರವಾಗಿದೆ. ಪುನರ್ವಸತಿಯ ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ. ಆದಷ್ಟು ಬೇಗ ಪುನರ್ವಸತಿ ಕಲ್ಪಿಸಬೇಕು ಎಂದು ಕೋರಿದರು.
ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿಈ ಪ್ರತಿಭಟನೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.