ADVERTISEMENT

ನ್ಯಾಯಾಲಯ ಕಲಾಪ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 4:33 IST
Last Updated 22 ಸೆಪ್ಟೆಂಬರ್ 2017, 4:33 IST
ನ್ಯಾಯಾಲಯ ಕಲಾಪ ಬಹಿಷ್ಕಾರ
ನ್ಯಾಯಾಲಯ ಕಲಾಪ ಬಹಿಷ್ಕಾರ   

ಶ್ರೀನಿವಾಸಪುರ: ಜಿಲ್ಲಾ ನ್ಯಾಯಾಧೀಶರ ನೇಮಕಾತಿಯನ್ನು ಕೇಂದ್ರೀಕೃತ ವ್ಯವಸ್ಥೆ ಮೂಲಕ ಮಾಡುವುದನ್ನು ವಿರೋಧಿಸಿ ವಕೀಲರು ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಟಿ.ವೆಂಕಟೇಶ್‌ ಮಾತನಾಡಿ, ‘ಈ ಹಿಂದೆ ಜಿಲ್ಲಾ ನ್ಯಾಯಾಧೀಶರನ್ನು ಹೈಕೋರ್ಟ್‌ ನ್ಯಾಯಾಧೀಶರು ನೇಮಿಸುತ್ತಿದ್ದರು. ಈಗ ಸುಪ್ರೀಂ ಕೋರ್ಟ್‌ ನೇಮಿಸುವಂತೆ ತಿದ್ದುಪಡಿ ತರಲಾಗಿದೆ. ಈ ತಿದ್ದುಪಡಿಯನ್ನು ಪಕ್ಕಕ್ಕಿಟ್ಟು ಹಿಂದಿನಂತೆಯೇ ನ್ಯಾಯಾಧೀಶರ ನೇಮಕ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕು’ ಎಂದು ಆಗ್ರಹಿಸಿದರು.

ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲರೆಡ್ಡಿ, ಮಾಜಿ ಅಧ್ಯಕ್ಷ ಪಿ.ಆರ್‌.ವೆಂಕಟರೆಡ್ಡಿ, ವಕೀಲರಾದ ಅರ್ಜುನ್‌, ವಿನಯ್‌ ಕುಮಾರ್‌, ಮಂಜುನಾಥರೆಡ್ಡಿ, ನಾರಾಯಣಸ್ವಾಮಿ, ಮುರಳಿ, ಜಯರಾಮರೆಡ್ಡಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.