ADVERTISEMENT

ರಾಜ್ಯ ಸರ್ಕಾರದ ಸಾಧನೆ ಮನೆ ಮನೆಗೆ ತಿಳಿಸಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2017, 8:48 IST
Last Updated 27 ಜುಲೈ 2017, 8:48 IST

ಮಾಲೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿ ಮನೆ ಮನೆಗೆ ತಿಳಿಸಬೇಕು’ ಎಂದು ಕೋಚಿಮುಲ್ ನಿರ್ದೇಶಕ ಕೆ.ವೈ.ನಂಜೇಗೌಡ ತಿಳಿಸಿದರು.

ತಾಲ್ಲೂಕಿನ ಲಕ್ಕೂರು ಗ್ರಾಮದಲ್ಲಿ ಮಂಗಳವಾರ ತಾಲ್ಲೂಕು ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಸಮಾವೇಶದಲ್ಲಿ  ಮಾತನಾಡಿದರು. ‘ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಬಗ್ಗೆ ಜನರು ಎಚ್ಚರದಿಂದ ಇರಬೇಕು.

ರಾಜ್ಯ ಸರ್ಕಾರ ತಾಲ್ಲೂಕಿನ ಅಭಿವೃದ್ಧಿಗೆ ಅಪಾರ ಪ್ರಮಾಣ ಅನುದಾನ ನೀಡಿದೆ. ಮುಂದಿನ ವಿಧಾನ ಸಭಾ ಚುನಾವಣೆ ಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಕೆಪಿಸಿಸಿ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ ಮಾತನಾಡಿ, ‘ಪಕ್ಷಕ್ಕೆ ದುಡಿಯುತ್ತಿರುವ ಹಿರಿಯರು ಮತ್ತು ಯುವಕರನ್ನು ಗುರುತಿಸಿ ಅವಕಾಶ ಕಲ್ಪಿಸಿದಾಗ ಮಾತ್ರ ಪಕ್ಷ ಬಲಪಡಿಸಲು ಸಾಧ್ಯ’ ಎಂದು ತಿಳಿಸಿದರು. ಎ.ಅಶ್ವತ್ಥರೆಡ್ಡಿ, ವಿಜಯ ನರಸಿಂಹಯ್ಯ, ಕಬೀರ್, ಮುರಳಿ, ಪದ್ಮನಾಭಯ್ಯ, ನಾರಾಯಣಸ್ವಾಮಿ, ಮೋಹನ್ ಸಿಂಗ್, ರಾಮಸಿಂಗ್, ಸಿದ್ದಾರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.