ADVERTISEMENT

ಸರಣಿ ಅಪಘಾತ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2018, 16:15 IST
Last Updated 3 ಜುಲೈ 2018, 16:15 IST
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ರಾಮಾಪುರ ಗೇಟ್‌ ಬಳಿ ಮಂಗಳವಾರ ಸರಣಿ ಅಪಘಾತ ಸಂಭವಿಸಿ ಮೂರು ಮಂದಿ ಮೃತಪಟ್ಟ ಸ್ಥಳದಲ್ಲಿ ಜನ ಗುಂಪುಗೂಡಿದ್ದರು.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ರಾಮಾಪುರ ಗೇಟ್‌ ಬಳಿ ಮಂಗಳವಾರ ಸರಣಿ ಅಪಘಾತ ಸಂಭವಿಸಿ ಮೂರು ಮಂದಿ ಮೃತಪಟ್ಟ ಸ್ಥಳದಲ್ಲಿ ಜನ ಗುಂಪುಗೂಡಿದ್ದರು.   

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ರಾಮಾಪುರ ಗೇಟ್‌ ಬಳಿ ಮಂಗಳವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರ ಪೈಕಿ ಒಬ್ಬರು ಜಿಲ್ಲೆಯ ಮಾಲೂರು ತಾಲ್ಲೂಕಿನ ಮಂಗಾಪುರ ಗ್ರಾಮದ ಮುನಿಕೃಷ್ಣಪ್ಪ (36) ಎಂದು ಗೊತ್ತಾಗಿದೆ. ಉಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ. ಟಿಪ್ಪರ್‌ ಹಾಗೂ ಸರಕು ಸಾಗಣೆ ಆಟೊ ಮಾಲೂರು ತಾಲ್ಲೂಕಿನ ಟೇಕಲ್‌ ಕಡೆಯಿಂದ ಬಂಗಾರಪೇಟೆಗೆ ಹೋಗುತ್ತಿದ್ದವು. ಅದೇ ವೇಳೆಗೆ ಎದುರುಗಡೆಯಿಂದ ಬೈಕ್‌ನಲ್ಲಿ ಸ್ನೇಹಿತನ ಜತೆ ಬರುತ್ತಿದ್ದ ಮುನಿಕೃಷ್ಣಪ್ಪ ಅವರು ನಿಯಂತ್ರಣ ತಪ್ಪಿ ಟಿಪ್ಪರ್‌ಗೆ ವಾಹನ ಗುದ್ದಿಸಿದ್ದಾರೆ. ಟಿಪ್ಪರ್‌ ಚಾಲಕ ಅಪಘಾತ ತಪ್ಪಿಸಲು ಏಕಾಏಕಿ ಬ್ರೇಕ್‌ ಹಾಕಿದ್ದಾರೆ. ಆಗ ಹಿಂದೆ ಬರುತ್ತಿದ್ದ ಸರಕು ಸಾಗಣೆ ಆಟೊ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಮುನಿಕೃಷ್ಣಪ್ಪ, ಅವರ ಸ್ನೇಹಿತ ಹಾಗೂ ಸರಕು ಸಾಗಣೆ ಆಟೊ ಚಾಲಕ ಮೃತಪಟ್ಟಿದ್ದಾರೆ. ಆಟೊದಲ್ಲಿದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್‌ ಮತ್ತು ಆಟೊ ನಜ್ಜು ಗುಜ್ಜಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.