ADVERTISEMENT

ಚನ್ನಮ್ಮ ವಿಜಯೋತ್ಸವ, ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2017, 7:12 IST
Last Updated 11 ನವೆಂಬರ್ 2017, 7:12 IST

ಕಾರಟಗಿ: ವೀರರಾಣಿ ಕಿತ್ತೂರು ಚನ್ನಮ್ಮ ಅವರ 194ನೇ ವಿಜಯೋತ್ಸವ ಹಾಗೂ ಕಾರಟಗಿ ತಾಲ್ಲೂಕು ಪಂಚಮಸಾಲಿ ಸಮಾಜದ ಸಮಾವೇಶ ನ. 12ರಂದು ಬೆಳಿಗ್ಗೆ 10.30ಕ್ಕೆ ಕೆರೆ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ಅಧ್ಯಕ್ಷ ಚನ್ನಬಸಪ್ಪ ವಿ. ಸುಂಕದ, ಖಜಾಂಚಿ ಬಸವರಾಜ್ ಕುಡ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮಿ ಸಾನ್ನಿಧ್ಯ ವಹಿಸುವರು. ಉದ್ದಿಮೆದಾರ ಸುಂಕದ ಲಿಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ ಚಾಲನೆ ನೀಡುವರು. ವಕೀಲರಾದ ಸವಿತಾ ರಮೇಶ ಉಪನ್ಯಾಸ ನೀಡುವರು.

ಬೆಳಗ್ಗೆ ಪೂರ್ಣಕುಂಭ, ಕಳಸ, ವಾದ್ಯಮೇಳಗಳೊಂದಿಗೆ ಕಿತ್ತೂರ ಚನ್ನಮ್ಮ ಭಾವಚಿತ್ರದ ಮೆರವಣಿಗೆ ಶರಣಬಸವೇಶ್ವರ ದೇವಾಲಯದಿಂದ ಆರಂಭಗೊಂಡು ಪ್ರಮುಖ ಬೀದಿಗಳ ಮೂಲಕ ಕೆರೆ ಬಸವೇಶ್ವರ ಕಲ್ಯಾಣವರೆಗೆ ಸಾಗಲಿದೆ.

ADVERTISEMENT

ಸಚಿವರಾದ ವಿನಯ್ ಆರ್‌. ಕುಲಕರ್ಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಾಲಿ, ಮಾಜಿ ಜನಪ್ರತಿನಿಧಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು, ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.